ಶ್ರೀನಿವಾಸಪುರ:ಜಗತ್ತಿಗೆ ಕಾಲಜ್ಞಾನ ಹೇಳುವ ಮೂಲಕ ಜಗತ್ತಿನ ಆಗುಹೋಗುಗಳ ಕುರಿತಾಗಿ ಹೆಚ್ಚರಿಕೆ ನೀಡಿದ ಮಹಾನ್ ಪುರುಷ ಪೋತುಲೂರು ವೀರಬ್ರಹ್ಮೇಂದ್ರ ಸ್ವಾಮಿಗಳು ಎಂದು ಶ್ರೀನಿವಾಸಪುರ ತಾಲೂಕು ವಿಶ್ವಕರ್ಮ ಸಮುದಾಯದ ಅಧ್ಯಕ್ಷ ಮೋಹನಾಚಾರಿ ಹೇಳಿದರು.
ಅವರು ಶ್ರೀನಿವಾಸಪುರ ಪಟ್ಟಣದ ಶ್ರೀ ಕಾಳಿಕಕಮಟೇಶ್ವರಿ ದೇವಾಲಯದಲ್ಲಿ ಕಾಲಜ್ಞಾನಿ ವೀರಬ್ರಹ್ಮೇಂದ್ರ ಸ್ವಾಮಿಯವರ ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ 17ನೇ ಶತಮಾನಕ್ಕೆ ಸೇರಿದವರಾದ ಶ್ರೀ ಮದ್ವಿರಾಟ್ ಪೋತುಲೂರಿ ವೀರಬ್ರಹ್ಮೇಂದ್ರಸ್ವಾಮಿಗಳು ತಮ್ಮ ಮಹಾನ್ ಕಂಠದಿಂದ ಜಗತ್ತಿಗೆ ತತ್ವಜ್ಞಾನವನ್ನು ಬೋಧಿಸಿದ ಮಹಾನ್ ಯೋಗಿಗಳು ಜಗತ್ತಿಗೆ ಶಾಂತಿ ಬಯಸಿ ಸರ್ವಜನರ ಶ್ರೆಯಸ್ಸು ಕೋರಿ ಅವರು ಹೇಳಿದಂತ ಕಾಲಜ್ಞಾನದ ವಿಚಾರಗಳು ಇಂದು ಜಗತ್ತಿನಲ್ಲಿ ನಡೆದಿರುತ್ತದೆ ನಡೆಯುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ವಿಶ್ವಕರ್ಮ ಸಮುದಾಯದ ಕಾರ್ಯದರ್ಶಿ ರವಿಚಂದ್ರಾಚಾರಿ, ಜಂಟಿ ಕಾರ್ಯದರ್ಶಿ ರಾಮಚಂದ್ರಾಚಾರಿ, ಸದಸ್ಯರಾದ ನಾರಾಯಣಚಾರಿ, ಮಹಿಳಾ ಘಟಕದ ಅಧ್ಯಕ್ಷೆ ಕೆ.ರಾದಮ್ಮ, ಸದಸ್ಯೆ ವಿಜಯಮ್ಮ ಮಂಜುನಾಥಚಾರಿ, ರಮೇಶ್ ಹಾಗು ಮುಂತಾದವರು ಇದ್ದರು
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



