ಶ್ರೀನಿವಾಸಪುರ:ಮನೆಗೆ ತೆರಳುತ್ತಿದ್ದ ಗೃಹಣಿಯನ್ನು ತಡೆದ ಅಪರಿಚಿತರು ಪೋಲಿಸರೆಂದು ಪರಿಚಯಿಸಿಕೊಂಡು ಅಕೆಯ ಕತ್ತಿನಲ್ಲಿರುವ ಸರವನ್ನು ತಗೆಸಿ ಕದ್ದುಕೊಂಡು ಹೋಗಿರುವ ಘಟನೆ ಪಟ್ಟಣದ ಪ್ರವಾಸಿ ಮಂದಿರದ ಬಳಿ ನಡೆದಿರುತ್ತದೆ.
ರತ್ನಮ್ಮ ಎಂಬ ನಡುವಯಸ್ಸಿನ ಮಹಿಳೆ ಸಂಜೆ ಸಮಯದಲ್ಲಿ ಊರಿಂದ ಬಂದು ಕಾಲೇಜು ಬಳಿ ಬಸ್ಸಿಳಿದು ಮನೆ ಕಡೆಗೆ ನಡೆದುಕೊಂಡು ಹೋರಟಿದ್ದಾರೆ, ಪ್ರವಾಸಿ ಮಂದಿರದ ಬಳಿ ಸುಮಾರು ಮೂರು ಮಂದಿ ಇದ್ದರು ಎನ್ನಲಾದ ಅಪರಿಚಿತರು ಆಕೆಯನ್ನು ತಡೆದಿದ್ದಾರೆ ಆತ್ಮೀಯತೆಯಿಂದ ಅಕ್ಕ ಎಂದು ಮಾತನಾಡಿಸಿ ಮುಂದೆ ಕಳ್ಳರ ಗ್ಯಾಂಗ್ ಇದೆ ನಿಮ್ಮ ಕತ್ತಿನಲ್ಲಿರುವ ಬಂಗಾರದ ಸರವನ್ನು ತಗೆದು ನಿಮ್ಮ ಪರ್ಸಿನಲ್ಲಿ ಇಟ್ಟುಕೊಳ್ಳಿ ಹಿಂದೆ ನಮ್ಮ ಸಾಹೇಬರು ಇದ್ದಾರೆ ಅವರೆ ಹೇಳಿದ್ದು ಎಂದು ನಂಬಿಸಿದ್ದಾರೆ,ಗಾಭರಿಯಾದ ಮಹಿಳೆ ತಕ್ಷಣ ಕತ್ತಿನಲ್ಲಿದ್ದ ಸರ ತಗೆದು ಕೈಯಲ್ಲಿದ್ದ ಪರ್ಸಿನಲ್ಲಿ ಇಡಲು ಅಪರಿಚಿನ ಸಹಾಯ ಪಡೆದಿದ್ದಾರೆ ಇದನ್ನೆ ಅವಕಾಶ ಮಾಡಿಕೊಂಡ ಅಪರಿಚಿತರು ಪರ್ಸಿನ ಜಿಪ್ ತಗೆದಿದ್ದಾರೆ ಆಕೆ ಪರ್ಸಿನಲ್ಲಿ ಬಂಗಾರದ ಸರ ಇಡುವಾಗ ಕೈಚಳಕ ತೊರಿಸಿ ಸರವನ್ನು ಯಾಮಾರಿಸಿದ್ದಾರೆ,ನಂತರದಲ್ಲಿ ಸಾಹೇಬರು ಕರಿತಿದ್ದಾರೆ ನಾವು ಬರುತ್ತೇವೆ ಎಂದು ಹೋರಟು ಹೋಗಿದ್ದಾರೆ ಮನೆಗೆ ಹೋದ ಮಹಿಳೆ ಪರ್ಸ್ ತಗೆದು ನೋಡಿದಾಗ ಅದರಲ್ಲಿ ಬಂಗಾರದ ಸರ ಇಲ್ಲದ್ದು ನೋಡಿ ಗಲಿಬಿಲಿಗೊಂಡಿದ್ದಾಳೆ ತಡಬಡಾಯಿಸಿಕೊಂಡು ನಡೆದಂತ ವಿಚಾರವನ್ನು ಕುಟುಂಬಸ್ಥರರೊಂದಿಗೆ ಹಂಚಿಕೊಂಡು ಗೋಳಾಡಿದ್ದಾರೆ ನಂತರ ಶ್ರೀನಿವಾಸಪುರ ಠಾಣೆಯಲ್ಲಿ ದೂರು ನೀಡಿರುತ್ತಾರೆ.
ಇತ್ತಿಚಿಗೆ ಪಟ್ಟಣದಲ್ಲಿ ಸರಗಳ್ಳತನ ವಾಹನ ಕಳ್ಳತನ ಜೇಬುಗಳ್ಳತನಗಳು ಹೆಚ್ಚಾಗುತ್ತಿದ್ದರು ಪೋಲಿಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರ ಆಕ್ರೋಶ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



