ಶ್ರೀನಿವಾಸಪುರ:ದನ ಕಾಯುತ್ತಿದ್ದ ವ್ಯಕ್ತಿಯ ಮೇಲೆ ಜೇನು ನೋಣ ದಾಳಿ ಮಾಡಿದ್ದು ವ್ಯಕ್ತಿ ತೀವ್ರವಾಗಿ ಅಸ್ವಸ್ಥಗೊಂಡು ಶ್ರೀನಿವಾಸಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಇಂದು ನಡೆದಿದೆ.
ಜೇನು ನೋಣ ದಾಳಿಯಿಂದ ಗಾಯಗೊಂಡು ಅಸ್ವಸ್ಥನಾಗಿರುವ ವ್ಯಕ್ತಿಯನ್ನು ತಾಲೂಕಿನ ಸೋಮಯಾಜಹಳ್ಳಿ ಪಂಚಾಯಿತಿಯ ಕೂಳಗುರ್ಕಿ ಗ್ರಾಮದ ವೆಂಕಟರಮಣಪ್ಪ ಎಂದು ಗುರುತಿಸಲಾಗಿದೆ.
ಎಂದಿನಂತೆ ಧನ ಕಾಯಲು ಜಾನುವಾರುಗಳನ್ನು ಹೊಡೆದುಕೊಂಡು ಊರಿನಿಂದ ಆಚೆ ಹೋಗಿರುವ ವೆಂಕಟರಮಣಪ್ಪ ಜಾನುವಾರುಗಳನ್ನು ಮೇಯಲು ಬಿಟ್ಟು ಮರದಡಿ ನಿದ್ರೆಗೆ ಜಾರಿದ್ದಾನೆ ನಂತರದಲ್ಲಿ ಏಕಾಏಕಿ ಅವರ ಮೇಲೆ ಜೇನುನೊಣಗಳ ಗುಂಪು ದಾಳಿ ನಡೆಸಿ ಕಚ್ಚಿದ್ದು ತೀವ್ರ ಅಸ್ವಸ್ಥಗೊಂಡಿದ್ದಾರೆ ಅವರನ್ನು ಚಿಕಿತ್ಸೆಗಾಗಿ ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿರುವುದಾಗಿ ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ.ಶ್ರೀನಿವಾಸಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



