ನ್ಯೂಜ್ ಡೆಸ್ಕ್:ಕಲಿಯುಗ ವೈಕುಂಠ ತಿರುಮಲ ಶ್ರೀನಿವಾಸನ ದರ್ಶನಕ್ಕೆ ತೆರಳುತ್ತಿರುವ ಭಕ್ತರಿಗೆ ದೇವರ ದರ್ಶನ ಮೂವತ್ತು ಗಂಟೆಗಳ ಸಮಯ ಹಿಡಿಯುತ್ತಿದೆ, ದಿನೆ ದಿನೆ ತಿರುಮಲದಲ್ಲಿ ಭಕ್ತರ ದಟ್ಟಣೆ ಹೆಚ್ಚುತ್ತಿದೆ ಕಳೆದ 20 ದಿನಗಳಿಂದ ತಿರುಮಲ ಜನಸಾಗರವಾಗಿ ಮಾರ್ಪಟ್ಟಿದೆ,ಸರ್ವದರ್ಶನ(ಉಚಿತದರ್ಶನ)ಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದೆ ಜನದಟ್ಟಣೆ ಹೆಚ್ಚಾಗಲು ಕಾರಣ ಎನ್ನುವ ಮಾತು ಕೇಳಿಬರುತ್ತಿದೆ,ಬೆಳಗ್ಗೆ ವಾಹನ ದಟ್ಟಣೆ ಸ್ವಲ್ಪ ಕಡಿಮೆಯಾಗುತ್ತಿದ್ದಂತೆ ಸಂಜೆ ವೇಳೆಗೆ ಮತ್ತೆ ಭಕ್ತರು ಬರುವ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ವಾಹನಗಳ ದಟ್ಟನೆ ಸಹ ಹೆಚ್ಚಾಗುತ್ತಿವೆ.
ದೇವರ ದರ್ಶನ ಪಡೆಯಲು ತೆರಳುವ ವೈಕುಂಠಂ ಕ್ಯೂ ಕಾಂಪ್ಲೆಕ್ಸ್ ಮತ್ತು ನಾರಾಯಣಗಿರಿ ಶೆಡ್ಗಳ ಎಲ್ಲಾ ಕೊಠಡಿಗಳು ಟೈಮ್ ಸ್ಲಾಟ್ ಟೋಕನ್ ಇಲ್ಲದೆ ತಿರುಮಲಕ್ಕೆ ಬಂದ ಭಕ್ತರಿಂದ ತುಂಬಿ ತುಳುಕುತ್ತಿದೆ ಕೊಠಡಿಗಳ ಹೊರಗೆ ಶಿಲಾ ತೋರಣಂ ತನಕ ಭಕ್ತರು ಕ್ಯೂ ಲೈನ್ ನಲ್ಲಿ ಕಾಯುತ್ತಿದ್ದಾರಂತೆ.
ಟೊಕನ್ ಇಲ್ಲದ ಉಚಿತ ದರ್ಶನಕ್ಕೆ ಸುಮಾರು 30 ಗಂಟೆಗಳ ಕಾಲ ಕಾಯಬೇಕಿದೆ, ರೂ.300 ಟಿಕೆಟ್ ಪಡೆದ ವಿಶೇಷ ಪ್ರವೇಶ ಟಿಕೆಟ್ ಹೊಂದಿರುವ ಭಕ್ತರು ಮೂರು-ನಾಲ್ಕು ಗಂಟೆಗಳಲ್ಲಿ ದರ್ಶನ ಪಡೆಯುತ್ತಿದ್ದು ವಾರದ ದಿನಗಳಲ್ಲಿ ಪ್ರತಿದಿನ ಸರಾಸರಿ 70 ರಿಂದ 80 ಸಾವಿರ ಹಾಗು ವಾರಾಂತ್ಯದಲ್ಲಿ ಅಂದಾಜು ಒಂದು ಲಕ್ಷ ಮಂದಿ ಭಕ್ತರು ತಿರುಮಲಕ್ಕೆ ಭೇಟಿ ನೀಡುತ್ತಿದ್ದಾರೆ ಎನ್ನಲಾಗುತ್ತಿದೆ. ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಟಿಟಿಡಿ ಅಧಿಕಾರಿಗಳು ವ್ಯವಸ್ಥೆ ಮಾಡುತ್ತಿದ್ದು ಸರತಿ ಸಾಲಿನಲ್ಲಿ ನಿಲ್ಲುವ ಭಕ್ತರಿಗೆ ಅನ್ನ, ಕುಡಿಯುವ ನೀರು, ಹಾಲು ನೀಡಲಾಗುತ್ತಿದೆ. ಭಕ್ತರು ಯಾವುದೇ ರಿತಿಯ ತೊಂದರೆಯಾಗದಂತೆ ಜನಸಂದಣಿಯನ್ನು ಗಮನದಲ್ಲಿಟ್ಟುಕೊಂಡು ತಿರುಮಲ ಪ್ರಯಾಣವನ್ನು ರೂಪಿಸಿಕೊಳ್ಳುವಂತೆ ಅಧಿಕಾರಿಗಳು ಸೂಚಿಸಿರುತ್ತಾರೆ. ದೇವರ ದರ್ಶನ ಪಡೆಯಲು ಭಕ್ತಾದಿಗಳು ಸರದಿ ಸಾಲಿನಲ್ಲಿ ಹೆಚ್ಚು ಹೊತ್ತು ಕಾಯಬೇಕಾಗುತ್ತದೆ. ಜೂನ್ 30ರವರೆಗೆ ಯಾವುದೆ ರಿತಿಯ ವಿಐಪಿ ಹಾಗು ವಾರಾಂತ್ಯ ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು ಕಲ್ಪಿಸಲಾಗುತ್ತಿದ್ದ ಬ್ರೇಕ್ ದರ್ಶನ ರದ್ದುಗೊಳಿಸಲಾಗಿದೆ ಎಂದು ಟಿಟಿಡಿ ಅಧಿಕಾರಿಗಳು ತಿಳಿಸಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



