ಚಿಂತಾಮಣಿ: ಪ್ರಪಂಚದಾದ್ಯಂತ ರೋಟರಿ ಸಂಸ್ಥೆ ಸಮಾಜಮುಖಿಯಾಗಿ ಕೆಲಸ ಮಾಡುತ್ತಿದೆ ಎಂದು ರೋಟರಿ ಸಂಸ್ಥೆ ಬೆಂಗಳೂರು ಉತ್ತರ ಭಾಗದ ಸದಸ್ಯತ್ವ ಯೋಜನಾ ಮುಖ್ಯಸ್ಥರಾದ ತಿರುಮುರುಗಮನ್ ಹೇಳಿದರು.
ಅವರು ಚಿಂತಾಮಣಿ ನಗರದಲ್ಲಿ ರೋಟರಿ ಸಂಸ್ಥೆ ಸ್ಥಾಪನೆ ಮಾಡುವ ಸಲುವಾಗಿ ರಿವಾರ್ಡ್ ಸಂಸ್ಥೆ ಕಚೇರಿಯಲ್ಲಿ ಆಸಕ್ತರಿಂದ ಸಂವಾದ ನಡೆಸಿ ಮಾತನಾಡಿದರು.
ಸಮಾಜದ ವಿವಿಧ ಹುದ್ದೆಗಳಲ್ಲಿರುವ ಮುಖ್ಯಸ್ಥರು ಕೂಡಿ ರೋಟರಿ ಸಂಸ್ಥೆಯನ್ನು ಸೇವಾಭಾವನೆಯಿಂದ ಸ್ಥಾಪಿಸಿದ್ದು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದೆ.ಪ್ರಪಂಚದಾದ್ಯಂತ 36911 ರೋಟರಿ ಕ್ಲಬ್ ಗಳು ಸ್ಥಾಪನೆಯಾಗಿವೆ, ಪ್ರಮುಖವಾಗಿ ಆರೋಗ್ಯಸೇವಾ ವ್ಯವಸ್ಥೆಯಲ್ಲಿ ತೊಡಗಿಸಿಕೊಂಡಿರುವ ರೋಟರಿ ಸಂಸ್ಥೆ ಹೊಸ ಮುನ್ನಡಿ ಬರೆದ ಹೆಮ್ಮೆ ಇದೆ ಪೊಲಿಯೋಗೆ ಮೊಟ್ಟಮೊದಲಬಾರಿಗೆ ಔಷದ ಕಂಡು ಹಿಡಿದು ಪ್ರಪಂಚ ಆರೋಗ್ಯ ಸಂಸ್ಥೆಗೆ ಹಕ್ಕುಸ್ವಾಮ್ಯ ಪಡೆಯದೆ ಫಾರ್ಮುಲಾವನ್ನು ಉಚಿತವಾಗಿ ನೀಡಿದಷ್ಟೆ ಅಲ್ಲದೆ ಅದರ ಡ್ರಾಪ್ಸ್ ತಯಾರಿಕೆಗೆ ಅರ್ಥಿಕ ಸಂಪನ್ಮೂಲ ಒದಗಿಸಿದೆ ಕೀರ್ತಿ ರೋಟರಿ ಸಂಸ್ಥೆಗೆ ಸಲ್ಲುತ್ತದೆ, ಪ್ರಪಂಚದಾದ್ಯಂತ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚು ಒತ್ತು ನೋಡುವ ದೃಷ್ಟಿಯಿಂದ ರೋಟರಿ ಸಂಸ್ಥೆ ತಾಲೂಕು ಮಟ್ಟದಲ್ಲೆ ಅಲ್ಲ ಹೋಬಳಿ ಮಟ್ಟದಲ್ಲೂ ಸ್ಥಾಪನೆಯಾಗಬೇಕಿದೆ ಇಂತಹ ಸಂಸ್ಥೆಯಲ್ಲಿ ಸದಸ್ಯತ್ವವನ್ನು ಪಡೆದು ಸಮಾಜ ಸೇವೆ ಮಾಡಲು ಮುಂದಾಗುವಂತೆ ಸಲಹೆ ಇತ್ತರು. ಸಂವಾದ ಸಭೆಯಲ್ಲಿ ಕೆ.ಎಂ.ಎಫ್ ನಿರ್ದೇಶಕ ವೈ.ಬಿ .ಅಶ್ವಥ್ ನಾರಾಯಣ ಬಾಬು, ಸರ್ಕಾರೇತರ ಸಂಸ್ಥೆ ಮುಖ್ಯಸ್ಥರಾದ ಎಸ್.ಎ ಪಾರ್ಥ,ರಿವಾರ್ಡ್ಸ ಸಂಸ್ಥೆ ಹರಿ ಪ್ರಸಾದ್, ಆರ್.ವೆಂಕಟರಾಮರೆಡ್ಡಿ, ಕೈವಾರ ಶ್ರೀನಿವಾಸ, ಪ್ರೊಫೇಷನಲ್ ಕೊರಿಯರ್ ಶ್ರೀನಿವಾಸಮೂರ್ತಿ,ಪತ್ರಕರ್ತ ಎನ್.ಆರ್. ಚಂದ್ರಮೋಹನ್, ಶಂಕರ್, ಜಾನಪದ ಕಲಾವಿದ ಮುನಿರೆಡ್ಡಿ, ಸಾಫ್ಟವೇರ್ ಸಂಸ್ಥೆ ನಳಿನಿ ಇನ್ನು ಹಲವರು ಭಾಗವಹಿಸಿದ್ದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



