ಶ್ರೀನಿವಾಸಪುರ:ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲವು ಸಾಧಿಸಿದ್ದು ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ತಮ್ಮ ಸಮೀಪದ ಪ್ರತಿಸ್ಪರ್ದಿ ಕಾಂಗ್ರೆಸ್ ಗೌತಮ್ ಅವರಿಗಿಂತ ಸುಮಾರು ಒಂಬತ್ತು ಸಾವಿರ ಮತಗಳ ಅಂತರ ದೊರತಿದೆ.
ಉಳಿದಂತೆ ಜೆಡಿಎಸ್ ಅಭ್ಯರ್ಥಿ ಲೋಕಸಭಾ ಕ್ಷೇತ್ರದಾದ್ಯಂತ ಉತ್ತಮ ಮತ ಗಳಿಸಿದ್ದು ತಮ್ಮ ಸ್ವಕ್ಷೇತ್ರ ಬಂಗಾರುಪೇಟೆಯಲ್ಲಿ ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚು ಮತ ಗಳಿಸಿದ್ದಾರೆ ಉಳಿದಂತೆ ಶಿಡ್ಲಘಟ್ಟಕ್ಷೇತ್ರದಲ್ಲಿ 411 ಕಾಂಗ್ರೇಸ್ ಹೆಚ್ಚುಮತಗಳ ಅಂತರ,ಚಿಂತಾಮಣಿಕ್ಷೇತ್ರದಲ್ಲಿ 7250 ಜೆಡಿಎಸ್ ಹೆಚ್ಚು ಮತ ಗಳಿಕೆ, ಶ್ರೀನಿವಾಸಪುರಕ್ಷೇತ್ರದಲ್ಲಿ 9492 ಜೆಡಿಎಸ್ ಹೆಚ್ಚು ಮತ ಗಳಿಕೆ, ಮುಳಬಾಗಿಲಿನ ಮೀಸಲು ವಿಧಾನ ಸಭಾ ಕ್ಷೇತ್ರದಲ್ಲಿ 32529 ಜೆಡಿಎಸ್ ಹೆಚ್ಚು ಮತ ಗಳಿಕೆ, ಕೆ.ಜಿ.ಎಫ್.ಮೀಸಲು ವಿಧಾನ ಸಭಾ ಕ್ಷೇತ್ರದಲ್ಲಿ 34431 ಕಾಂಗ್ರೇಸ್ ಹೆಚ್ಚುಮತಗಳ ಅಂತರ, ಬಂಗಾರುಪೇಟೆಮೀಸಲು ವಿಧಾನ ಸಭಾ ಕ್ಷೇತ್ರದಲ್ಲಿ 28134 ಜೆಡಿಎಸ್ ಹೆಚ್ಚು ಮತಗಳ ಅಂತರ,ಕೋಲಾರ ಕ್ಷೇತ್ರದಲ್ಲಿ 8940 ಜೆಡಿಎಸ್ ಮತಗಳ ಅಂತರ,ಮಾಲೂರು ಕ್ಷೇತ್ರದಲ್ಲಿ 13300 ಜೆಡಿಎಸ್ ಹೆಚ್ಚು ಮತಗಳ ಅಂತರ.ಪಡೆದಿರುವ ಎನ್ಡಿಯೆ ಮೈತ್ರಿ ಕೂಟದ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಸುಮಾರು 50 ಸಾವಿರ ಮತಗಳಿಂದ ಗೆಲವು ಸಾಧಿಸಿದ್ದಾರೆ.
ಎದ್ದು ಬಿದ್ದು ಗೆದ್ದ ಮಲ್ಲೇಶ್ ಬಾಬು!
ಆರಂಭದಲ್ಲಿ ಸುಮಾರು ಎಪ್ಪತ್ತು ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಮುನ್ನಡೆಯಲ್ಲಿದ್ದ ಜೆಡಿಎಸ್ ಅಭ್ಯರ್ಥಿ ನಂತರದಲ್ಲಿ ಏಕಾ ಏಕಿ ಸುಮಾರು ಅರವತ್ತು ಸಾವಿರ ಮತಗಳಿಂದ ಹಿನ್ನೆಡೆ ಅನಿಭವಿಸಿದರು ಇತ್ತ ಸುದ್ಧಿ ನೋಡುತ್ತಿದ್ದ ಜೆಡಿಎಸ್ ಕಾರ್ಯಕರ್ತರು ಸಾರ್ವಜನಿಕರು ಗಾಭರಿಯಾಗಿ ಹೋದರು ಎಲ್ಲಿಯ ಮುನ್ನಡೆ ಯಾಕೆ ಈಗ ಹಿನ್ನಡೆ ಎಂದು ವ್ಯಾಟ್ಸಾಪ್ ಚರ್ಚೆಗಳು ಶುರುವಾದವು ನಂತರದಲ್ಲಿ ನಿಧಾನಗತಿಯಲ್ಲಿ ಗೆಲುವಿನ ಗ್ರಾಫ್ ಏರುತ್ತ ಸಾಗಿದ್ದು ಕೊನೆಗೆ ಸುಮಾರು 50 ಸಾವಿರ ಮತಗಳ ಅಂತರದಲ್ಲಿ ಗೆದ್ದಿದ್ದಾರೆ.
ಕೈ ಕೊಟ್ಟ ಕೆಜಿಎಫ್ ಕೈ ಹಿಡಿದ ಮಾಲೂರು
ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಅವರಿಗೆ ಕಾಂಗ್ರೆಸ್ ಶಾಸಕಿ ಇರುವ ಕೆ.ಜಿ.ಎಫ್.ಮೀಸಲು ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ ಪರವಾಗಿ ಸುಮಾರು ಮೂವತ್ತು ಸಾವಿರಕ್ಕೂ ಹೆಚ್ಚು ಮತ ಬಂದಿದ್ದು ಇದರಿಂದಾಗಿ ಎಪ್ಪತೈದು ಸಾವಿರ ಲೀಡ್ ನಲ್ಲಿದ್ದ ಮಲ್ಲೇಶ್ ಬಾಬು ಸೀನ್ ರೀವರ್ಸ್ ಆಗಿತ್ತು ಆಗ ಅವರಿಗೆ ಸಹಾಯಕ್ಕೆ ಬಂದದ್ದು ಮಾಲೂರು ಕ್ಷೇತ್ರದಲ್ಲಿ 13300 ಜೆಡಿಎಸ್ ಲೀಡ್ ನೀಡಿ ಕೈ ಹಿಡಿದು ಗೆಲವಿನ ಅಂತರ ಹೆಚ್ಚಿಸಿತು.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Sunday, June 15