ಶ್ರೀನಿವಾಸಪುರ:ಹಣ ಪಣಕ್ಕಿಟ್ಟು ಇಸ್ಪೀಟ್ ಆಡುತ್ತಿದ್ದ ಗುಂಪಿನ ಮೇಲೆ ಪೋಲಿಸರು ದಾಳಿ ನಡೆಸಿ ಇಸ್ಪೀಟ್ ಆಡುತ್ತಿದ್ದವರನ್ನು ಬಂಧಿಸಿ 4 ದ್ವಿಚಕ್ರ ವಾಹನಗಳು ಮತ್ತು ಹಣವನ್ನು ವಶಪಡಿಸಿಕೊಂಡಿದ್ದಾರೆ.
ಶ್ರೀನಿವಾಸಪುರ ತಾಲ್ಲೂಕಿನ ಅಲಂಬಗಿರಿ ಗ್ರಾಮದ ಸಮೀಪ ಮಾವಿನ ತೋಟದಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿದ್ದವರ ಮೇಲೆ ಮುಳಬಾಗಿಲು ಡಿ.ವೈ.ಎಸ್.ಪಿ ನಂದಕುಮಾರ್ ನೇತೃತ್ವದಲ್ಲಿ ಶ್ರೀನಿವಾಸಪುರ ಪೋಲಿಸ್ ಸರ್ಕಲ್ ಇನ್ಸಪೇಕ್ಟರ್ ಮೊಹಮದ್ ಗೊರವನಕೊಳ್ಳ,ಮುಳಬಾಗಿಲು ಗ್ರಾಮಾಂತರ ಪಿ.ಎಸ್.ಐ ವಿಠ್ಠಲ್ ತಳವಾರ್.ರಾಯಲ್ಪಾಡ್ ಪಿ.ಎಸ್.ಐ ಯೋಗಿಶ್ ಕುಮಾರ್ ತಂಡ ದಾಳಿ ನಡೆಸಿ ನೇತೃತ್ವದಲ್ಲಿ ದಾಳಿ ಮಾಡಿದ್ದು ಏಳು ಮಂದಿ ಇಸ್ಪೀಟ್ ಆಡುತ್ತಿದ್ದವರನ್ನು ಬಂಧಿಸಿರುತ್ತಾರೆ ಇಸ್ಪೀಟ್ ಆಟದಲ್ಲಿ ಪಣಕ್ಕಿಟ್ಟಿದ್ದ 42200/- ಹಣ ಹಾಗು ಅಲ್ಲಿದ್ದ 4 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂದಿತ ಆರೋಪಿಗಳಲ್ಲಿ ಚಿಂತಾಮಣಿ,ಶ್ರೀನಿವಾಸಪುರ ತಾಲೂಕಿನವರು ಇದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ.
ತಾಲೂಕಿನಲ್ಲಿ ಇತ್ತಿಚಿಗೆ ಇಸ್ಪೀಟ್ ದಂದೆ ಎಗ್ಗು ಸಿಗ್ಗಿಲ್ಲದೆ ಎಲ್ಲಂದರಲ್ಲಿ ನಡೆಯುತ್ತಿದೆ ಎಂದು ಸಾರ್ವಜನಿಕರು ತೀವ್ರಧಾಟಿಯಲ್ಲಿ ಆರೋಪಿಸುತ್ತಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Friday, April 24



