ಶ್ರೀನಿವಸಪುರ:ಕ್ಷಣಮಾತ್ರದಲ್ಲಿ ಕೈಚಳಕ ತೋರಿ ಹಣ ಕದಿಯುವ ಓಜಿಕುಪ್ಪಂ ಕಳ್ಳರ ಗ್ಯಾಂಗ್ ಕೋಲಾರ ಜಿಲ್ಲೆಗೆ ಒಕ್ಕರಿಸಿಕೊಂಡಿದೆ,ಈಗ್ಗೆ ಎರಡು ವರ್ಷಗಳ ಹಿಂದೆ ಬೆಂಗಳೂರು ನಗರ ಪೋಲಿಸರಿಗೆ ತಲೆ ನೋವಾಗಿ ಕಾಡಿದ್ದ ಓಜಿಕುಪ್ಪಂ ಕಳ್ಳರ ಗ್ಯಾಂಗ್ ಅನ್ನು ಹೆಡೆ ಮುರಿ ಕಟ್ಟುವಲ್ಲಿ ಬೆಂಗಳೂರು ಪೋಲಿಸರು ಯಶಸ್ವಿಯಾಗಿದ್ದರು. ಈಗ ಓಜಿಕುಪ್ಪಂ ಕಳ್ಳರ ಗ್ಯಾಂಗ್ ಕೋಲಾರಕ್ಕೆ ಬಂದಿದೆ ಇದನ್ನು ಕೋಲಾರ ಜಿಲ್ಲೆ ಪೋಲಿಸರೆ ಒಪ್ಪಿಕೊಳ್ಳುತ್ತಾರೆ. ಓಜಿಕುಪ್ಪಂ ಕದೀಮರ ಗ್ಯಾಂಗ್ ಸ್ಕೂಟರ್ ಡಿಕ್ಕಿಯಲ್ಲಿ ಇಟ್ಟಿದ್ದ ಹಣ ಕಾರಲ್ಲಿದ್ದ ಲಕ್ಷಾಂತರ ರೂಪಾಯಿ ಹಣವನ್ನ ಎಗರಿಸಿರುವ ಘಟನೆಗಳು ಅವಿಭಜಿತ ಕೋಲಾರದ ಶ್ರೀನಿವಾಸಪುರ ಚಿಂತಾಮಣಿ ವೇಮಗಲ್ ಗಳಲ್ಲಿ ಸರಣಿಯಾಗಿ ನಡೆಯುತ್ತಿದೆ.
ಶನಿವಾರ ಶ್ರೀನಿವಾಸಪುರದಲ್ಲಿ ಮಾವುಬೆಳೆಗಾರನ ಸ್ಕೂಟರ್ ನಲ್ಲಿದ್ದ ಒಂದೂವರೆ ಲಕ್ಷ ಹಣ ಎಗರಿಸಿದ್ದು ಇದು ಮಾಸುವ ಮುನ್ನವೆ ಸೋಮವಾರ ಚಿಂತಾಮಣಿ ನಗರದಲ್ಲಿ ಈರುಳ್ಳಿ ವ್ಯಾಪಾರಿ ಕಾರನಲ್ಲಿ ದುಡ್ಡಿಟ್ಟು ದೇವಸ್ಥಾನಕ್ಕೆ ಹೋಗಿಬರುಷ್ಟರಲ್ಲಿ ಕಾರಿನ ಗಾಜು ಒಡೆದು ಹಣ ಎಗರಿಸಿದ್ದಾರೆ.ಮಂಗಳವಾರ ವೇಮಗಲ್ ನಲ್ಲಿ ಬ್ಯಾಂಕ್ ಬಳಿ ಸ್ಕೂಟರನಲ್ಲಿಟ್ಟಿದ್ದ ಹಣ ಕದ್ದಿದ್ದಾರೆ.
ಏನು ಯಾರಿದು ಓಜಿಕುಪ್ಪಂ ಗ್ಯಾಂಗ್?
ತಮಿಳುನಾಡು-ಆಂಧ್ರ ಗಡಿಯಲ್ಲಿನ ವಿಕೋಟೆ ಬಳಿ ಇರುವ ಓಜಿಕುಪ್ಪಂ ಊರಿನ ಗ್ಯಾಂಗ್ ಇವರು ತಂಡವಾಗಿ ಕಳ್ಳತನಕ್ಕೆ ಇಳಿಯುತ್ತಾರೆ ಎಂದು ಪೋಲಿಸ್ ಇಲಾಖೆ ಅಂದಾಜಿಸಿದೆ.ಓಜಿಕುಪ್ಪಂ ಕದೀಮರ ಗ್ಯಾಂಗ್ ಪೋಲಿಸರಿಗೆ ಚಳ್ಳೆ ಹಣ್ಣು ತಿನ್ನಿಸುವುದರಲ್ಲಿ ಪರಿಣಿತರು ಖತರ್ನಾಕ್ ಐಡಿಯಾಗಳನ್ನು ಮಾಡಿ ಹಣ ಎಗರಿಸೋದರಲ್ಲಿ ನಿಸ್ಸೀಮರು.ಜನರಿಗೆ ಯಾವುದೇ ಗಾಯ ಮಾಡದೇ ಯಾಮಾರಿಸುವಂತ ಚಾಲಾಕಿ ಕಳ್ಳರು,ಕಳ್ಳತನ ಎಸಗಿದ ಒಂದು ದಿನದ ನಂತರ ಇವರು ಸೆರೆ ಸಿಕ್ಕರೂ ಅವರ ಬಳಿ ನಯಾ ಪೈಸೆ ಹಣ ರೀಕವರಿಯಾಗುದಿಲ್ಲವಂತೆ ಹೀಗಾಗಿ ಓಜಿಕುಪ್ಪಂ ಗ್ಯಾಂಗ್ ಹೆಸರು ಕೇಳಿದ್ರೆ ಪೊಲೀಸರೇ ದಂಗಾಗುತ್ತಾರೆ ಎಂಬ ಮಾತಿದೆ.ಇಂತಹ ಗ್ಯಾಂಗ್ ಕೋಲಾರ ಜಿಲ್ಲೆಗೆ ಕಾಲಿಟ್ಟಿದೆ. ಬ್ಯಾಂಕ್ ಗಳು ಇರುವ ಪ್ರದೇಶವೆ ಇವರ ಅಡ್ಡ ಬ್ಯಾಂಕಿನಲ್ಲಿ ಹಣ ಡ್ರಾ ಮಾಡುವಂತ ಜನರೇ ಇವರ ಮುಖ್ಯ ಟಾರ್ಗೆಟ್. ಹೆಚ್ಚು ಹಣಕಾಸಿನ ವ್ಯವಹಾರ ನಡೆಯೋ ಬ್ಯಾಂಕುಗಳ ಬಳಿ ಹೆಚ್ಚು ಗಮನವನ್ನು ಕೇಂದ್ರಿಕರಿಸಿರುತ್ತಾರೆ.ಜನರ ಗಮನ ಬೇರೆಡೆ ಸೆಳೆದು ಸಂಚು ರೂಪಿಸಿ ಹಣ ದೋಚುವ ಖತರ್ನಾಕ್ ಗ್ಯಾಂಗ್ ಇದು. ಮೈಮೇಲೆ ಉಗಿಯುವುದು, ಕೆಸರು ಎರಚುವುದು ಸೇರಿದಂತೆ ಹಲವಾರು ರೀತಿಯಲ್ಲಿ ಜನರ ಗಮನ ಬೇರೆಡೆ ಸೆಳೆದು ಹಣ ದೋಚುವ ಇವರು ತಮ್ಮ ಕೃತ್ಯದ ವೇಳೆ ಯಾರಿಗೂ ಹಿಂಸೆ ಪ್ರಾಣ ಹಾನಿ ಮಾಡುವುದಿಲ್ಲ ಎನ್ನುತ್ತದೆ ಪೋಲಿಸ್ ಇಲಾಖೆ.ಇನ್ನು ಇವರು ವಾರಕ್ಕೆರಡು ಅಥಾವ ಮೂರು ದಿನ ಮಾತ್ರ ಕಾರ್ಯಚರಣೆ ಮಾಡಿ ಗಡಿ ದಾಟುತ್ತಾರೆ ಅಂದರೆ ಊರು ಬಿಡುತ್ತಾರಂತೆ ಇವರ ಕುರಿತಾಗಿ ಬೆಂಗಳೂರಿನ ಪೋಲಿಸರು ಸಾಕಷ್ಟು ಅಧ್ಯಯನ ನಡೆಸಿ ಇವರಿಗೆ ಸರಿಯಾದ ಪಾಠ ಕಲಿಸಿದ್ದರು ಎನ್ನಲಾಗುತ್ತಿದೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Monday, April 28