ಶ್ರೀನಿವಾಸಪುರ:ಆಂಧ್ರಪ್ರದೇಶದ ಅಸೆಂಬ್ಲಿ ಸಮಾವೇಶ ನಡೆಯುತ್ತಿದೆ ಈ ಸಂದರ್ಭದಲ್ಲಿ ಶ್ರೀನಿವಾಸಪುರದ ಶಾಸಕ ವೆಂಕಟಶಿವಾರೆಡ್ಡಿ ಅವರು ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪುತ್ರ ಹಾಗು ಐಟಿ ಮತ್ತು ಮಾನವ ಸಂಪನ್ಮೂಲ ಸಚಿವ ಲೋಕೆಶ್ ಅವರನ್ನು ವಿಜಯವಾಡದ ವೆಲಗಪುಡಿಯಲ್ಲಿರುವ ವಿಧಾನಸಭಾ ಸಚಿವಾಲಯದಲ್ಲಿ ಭೇಟಿಯಾಗಿ ನೂತನ ಸರ್ಕಾರಕ್ಕೆ ಹಳದಿ ಬಣ್ಣದ ಹೂಗುಚ್ಚ ನೀಡಿ ಶುಭಕೋರಿದ್ದಾರೆ.
ನಂತರ ಇಬ್ಬರು ಚರ್ಚೆ ನಡೆಸಿದ್ದು ಕರ್ನಾಟಕ-ಆಂಧ್ರ ಗಡಿಯಂಚಿನ ಭಾಗದ ರಸ್ತೆಗಳ ಅಭಿವೃದ್ಧಿ ನೀರಾವರಿ ಹಾಗು ರೈಲ್ವೆಮಾರ್ಗಗಳ ಕುರಿತಂತೆ ಚರ್ಚೆ ನಡೆಸಿರುವುದಾಗಿ ತಿಳಿದು ಬಂದಿದೆ. ಆಂಧ್ರ ಅಸೆಂಬ್ಲಿ ಸಮಾವೇಶದ ನಡೆಯುತ್ತಿದ್ದು ಆಂಧ್ರ ಬಡ್ಜೆಟ್ ಮಂಡನೆಯಾಗುವ ಸಂದರ್ಭದಲ್ಲಿ ಇಬ್ಬರ ಭೇಟಿ ಮಹತ್ವ ಪಡೆದುಕೊಂಡಿದೆ.
ಇತ್ತಿಚಿಗೆ ನಡೆದಂತ ಆಂಧ್ರಪ್ರದೇಶದ ಚುನಾವಣೆ ವಿಚಾರವಾಗಿ ತಮ್ಮ ಆಪ್ತರ ಬಳಿ ಈ ಬಾರಿ ಆಂಧ್ರದಲ್ಲಿ ಮೈತ್ರಿ ಕೂಟ ಅಧಿಕಾರಕ್ಕೆ ಬರಲಿದೆ ಚಂದ್ರಬಾಬುನಾಯ್ಡು ನಾಲ್ಕನೆ ಬಾರಿಗೆ ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ವೆಂಕಟಶಿವಾರೆಡ್ಡಿ ಭವಿಷ್ಯ ನುಡಿದಿದ್ದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



