ಶ್ರೀನಿವಾಸಪುರ:ಆಂಧ್ರಪ್ರದೇಶದ ಅಸೆಂಬ್ಲಿ ಸಮಾವೇಶ ನಡೆಯುತ್ತಿದೆ ಈ ಸಂದರ್ಭದಲ್ಲಿ ಶ್ರೀನಿವಾಸಪುರದ ಶಾಸಕ ವೆಂಕಟಶಿವಾರೆಡ್ಡಿ ಅವರು ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪುತ್ರ ಹಾಗು ಐಟಿ ಮತ್ತು ಮಾನವ ಸಂಪನ್ಮೂಲ ಸಚಿವ ಲೋಕೆಶ್ ಅವರನ್ನು ವಿಜಯವಾಡದ ವೆಲಗಪುಡಿಯಲ್ಲಿರುವ ವಿಧಾನಸಭಾ ಸಚಿವಾಲಯದಲ್ಲಿ ಭೇಟಿಯಾಗಿ ನೂತನ ಸರ್ಕಾರಕ್ಕೆ ಹಳದಿ ಬಣ್ಣದ ಹೂಗುಚ್ಚ ನೀಡಿ ಶುಭಕೋರಿದ್ದಾರೆ.
ನಂತರ ಇಬ್ಬರು ಚರ್ಚೆ ನಡೆಸಿದ್ದು ಕರ್ನಾಟಕ-ಆಂಧ್ರ ಗಡಿಯಂಚಿನ ಭಾಗದ ರಸ್ತೆಗಳ ಅಭಿವೃದ್ಧಿ ನೀರಾವರಿ ಹಾಗು ರೈಲ್ವೆಮಾರ್ಗಗಳ ಕುರಿತಂತೆ ಚರ್ಚೆ ನಡೆಸಿರುವುದಾಗಿ ತಿಳಿದು ಬಂದಿದೆ. ಆಂಧ್ರ ಅಸೆಂಬ್ಲಿ ಸಮಾವೇಶದ ನಡೆಯುತ್ತಿದ್ದು ಆಂಧ್ರ ಬಡ್ಜೆಟ್ ಮಂಡನೆಯಾಗುವ ಸಂದರ್ಭದಲ್ಲಿ ಇಬ್ಬರ ಭೇಟಿ ಮಹತ್ವ ಪಡೆದುಕೊಂಡಿದೆ.
ಇತ್ತಿಚಿಗೆ ನಡೆದಂತ ಆಂಧ್ರಪ್ರದೇಶದ ಚುನಾವಣೆ ವಿಚಾರವಾಗಿ ತಮ್ಮ ಆಪ್ತರ ಬಳಿ ಈ ಬಾರಿ ಆಂಧ್ರದಲ್ಲಿ ಮೈತ್ರಿ ಕೂಟ ಅಧಿಕಾರಕ್ಕೆ ಬರಲಿದೆ ಚಂದ್ರಬಾಬುನಾಯ್ಡು ನಾಲ್ಕನೆ ಬಾರಿಗೆ ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ವೆಂಕಟಶಿವಾರೆಡ್ಡಿ ಭವಿಷ್ಯ ನುಡಿದಿದ್ದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Friday, April 24



