ಶ್ರೀನಿವಾಸಪುರ:ಒಂಟಿ ಮನೆ ಗುರಿಯಾಗಿಸಿಕೊಂಡು ದರೋಡೆ ಮಾಡಿರುವ ಘಟನೆ ಬೆಂಗಳೂರು-ಕಡಾಪ ಹೈವೆ ರಸ್ತೆಯಲ್ಲಿ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ್ ಕ್ರಾಸ್ ನಲ್ಲಿ ನಡೆದಿರುತ್ತದೆ.
ಬುಧವಾರ ರಾತ್ರಿ ಸುಮಾರು ಎಂಟುಗಂಟೆ ಸಮಯದಲ್ಲಿ ತಾಡಿಗೋಳ್ ಕ್ರಾಸ್ ಸಮೀಪದಲ್ಲಿರುವ ಭಗವಾನ್ ಶಾಲೆ ಬಳಿಯ ಒಂಟಿಮನೆಯಲ್ಲಿ ಮನೆಯ ಯಜಮಾನ ರೇಷನ್ ತರಲು ಅಂಗಡಿಗೆ ಹೋಗಿದ್ದ ವೇಳೆ ನಾಲ್ಕು ಜನರಿದ್ದ ಅಪರಿಚಿತರ ಗುಂಪು ಮನೆಯ ಬಳಿ ಕುರಿಶೆಡ್ ಜಾಗದಲ್ಲಿ ಅವಿತಿರುತ್ತಾರೆ ಈ ಸಮಯದಲ್ಲಿ ನಾಯಿ ಬೊಗಳಿದ್ದು ಅನುಮಾನಗೊಂಡ ಮನೆಯ ಯಜಮಾನಿ ಶೆಡ್ ಬಳಿ ನೋಡಿದಾಗ ಅಲ್ಲಿದ್ದ ದಾಂಡಿಗರ ಗುಂಪು ಆಕೆಯನ್ನು ಹೆದರಿಸಿದ್ದಾರೆ ಆಕೆ ಭಯದಿಂದ ಮನೆಯತ್ತಿರ ಓಡಿಬಂದಿದ್ದಾರು ದಾಂಡಿಗರ ಗುಂಪು ಅಟ್ಟಿಸಿಕೊಂಡು ಬಂದು ಮನೆಯೊಳಗೆ ನುಗ್ಗಿದ್ದಾರೆ ತಮ್ಮಲ್ಲಿದ್ದ ಪಿಸ್ತೂಲ್ ಲಾಂಗುಗಳು ತೋರಿಸಿ ಮನೆಯಲ್ಲಿದ್ದ ಇಬ್ಬರು ಮಹಿಳೆಯರನ್ನು ಬೆದರಿಸಿದ ಖದೀಮರು ಮನೆ ಯಜಮಾನಿ ಹಾಕಿಕೊಂಡಿದ್ದ ಮಾಂಗಲ್ಯ,3 ಜೊತೆ ಓಲೆ,6 ಉಂಗುರ,1 ನಕ್ಲೆಸ್, 55 ಸಾವಿರ ಹಣವನ್ನು ತಗೆದುಕೊಂಡು ಹೋಗಿದ್ದಾರೆ.ಮನೆಯಲ್ಲಿದ್ದ ವಸ್ತುಗಳನ್ನು ಚಲ್ಲಾಪಿಲ್ಲಿ ಮಾಡಿದ್ದಾರೆ
ಘಟನಾ ಸ್ಥಳಕ್ಕೆ ಗೌನಿಪಲ್ಲಿ ಪೊಲೀಸರು ಭೇಟಿ ಕೊಟ್ಟು ಪರಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Monday, June 16