ಶ್ರೀನಿವಾಸಪುರ:ಒಂಟಿ ಮನೆ ಗುರಿಯಾಗಿಸಿಕೊಂಡು ದರೋಡೆ ಮಾಡಿರುವ ಘಟನೆ ಬೆಂಗಳೂರು-ಕಡಾಪ ಹೈವೆ ರಸ್ತೆಯಲ್ಲಿ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ್ ಕ್ರಾಸ್ ನಲ್ಲಿ ನಡೆದಿರುತ್ತದೆ.
ಬುಧವಾರ ರಾತ್ರಿ ಸುಮಾರು ಎಂಟುಗಂಟೆ ಸಮಯದಲ್ಲಿ ತಾಡಿಗೋಳ್ ಕ್ರಾಸ್ ಸಮೀಪದಲ್ಲಿರುವ ಭಗವಾನ್ ಶಾಲೆ ಬಳಿಯ ಒಂಟಿಮನೆಯಲ್ಲಿ ಮನೆಯ ಯಜಮಾನ ರೇಷನ್ ತರಲು ಅಂಗಡಿಗೆ ಹೋಗಿದ್ದ ವೇಳೆ ನಾಲ್ಕು ಜನರಿದ್ದ ಅಪರಿಚಿತರ ಗುಂಪು ಮನೆಯ ಬಳಿ ಕುರಿಶೆಡ್ ಜಾಗದಲ್ಲಿ ಅವಿತಿರುತ್ತಾರೆ ಈ ಸಮಯದಲ್ಲಿ ನಾಯಿ ಬೊಗಳಿದ್ದು ಅನುಮಾನಗೊಂಡ ಮನೆಯ ಯಜಮಾನಿ ಶೆಡ್ ಬಳಿ ನೋಡಿದಾಗ ಅಲ್ಲಿದ್ದ ದಾಂಡಿಗರ ಗುಂಪು ಆಕೆಯನ್ನು ಹೆದರಿಸಿದ್ದಾರೆ ಆಕೆ ಭಯದಿಂದ ಮನೆಯತ್ತಿರ ಓಡಿಬಂದಿದ್ದಾರು ದಾಂಡಿಗರ ಗುಂಪು ಅಟ್ಟಿಸಿಕೊಂಡು ಬಂದು ಮನೆಯೊಳಗೆ ನುಗ್ಗಿದ್ದಾರೆ ತಮ್ಮಲ್ಲಿದ್ದ ಪಿಸ್ತೂಲ್ ಲಾಂಗುಗಳು ತೋರಿಸಿ ಮನೆಯಲ್ಲಿದ್ದ ಇಬ್ಬರು ಮಹಿಳೆಯರನ್ನು ಬೆದರಿಸಿದ ಖದೀಮರು ಮನೆ ಯಜಮಾನಿ ಹಾಕಿಕೊಂಡಿದ್ದ ಮಾಂಗಲ್ಯ,3 ಜೊತೆ ಓಲೆ,6 ಉಂಗುರ,1 ನಕ್ಲೆಸ್, 55 ಸಾವಿರ ಹಣವನ್ನು ತಗೆದುಕೊಂಡು ಹೋಗಿದ್ದಾರೆ.ಮನೆಯಲ್ಲಿದ್ದ ವಸ್ತುಗಳನ್ನು ಚಲ್ಲಾಪಿಲ್ಲಿ ಮಾಡಿದ್ದಾರೆ
ಘಟನಾ ಸ್ಥಳಕ್ಕೆ ಗೌನಿಪಲ್ಲಿ ಪೊಲೀಸರು ಭೇಟಿ ಕೊಟ್ಟು ಪರಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Monday, April 28