ಶ್ರೀನಿವಾಸಪುರ:ಒಂಟಿ ಮನೆ ಗುರಿಯಾಗಿಸಿಕೊಂಡು ದರೋಡೆ ಮಾಡಿರುವ ಘಟನೆ ಬೆಂಗಳೂರು-ಕಡಾಪ ಹೈವೆ ರಸ್ತೆಯಲ್ಲಿ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ್ ಕ್ರಾಸ್ ನಲ್ಲಿ ನಡೆದಿರುತ್ತದೆ.
ಬುಧವಾರ ರಾತ್ರಿ ಸುಮಾರು ಎಂಟುಗಂಟೆ ಸಮಯದಲ್ಲಿ ತಾಡಿಗೋಳ್ ಕ್ರಾಸ್ ಸಮೀಪದಲ್ಲಿರುವ ಭಗವಾನ್ ಶಾಲೆ ಬಳಿಯ ಒಂಟಿಮನೆಯಲ್ಲಿ ಮನೆಯ ಯಜಮಾನ ರೇಷನ್ ತರಲು ಅಂಗಡಿಗೆ ಹೋಗಿದ್ದ ವೇಳೆ ನಾಲ್ಕು ಜನರಿದ್ದ ಅಪರಿಚಿತರ ಗುಂಪು ಮನೆಯ ಬಳಿ ಕುರಿಶೆಡ್ ಜಾಗದಲ್ಲಿ ಅವಿತಿರುತ್ತಾರೆ ಈ ಸಮಯದಲ್ಲಿ ನಾಯಿ ಬೊಗಳಿದ್ದು ಅನುಮಾನಗೊಂಡ ಮನೆಯ ಯಜಮಾನಿ ಶೆಡ್ ಬಳಿ ನೋಡಿದಾಗ ಅಲ್ಲಿದ್ದ ದಾಂಡಿಗರ ಗುಂಪು ಆಕೆಯನ್ನು ಹೆದರಿಸಿದ್ದಾರೆ ಆಕೆ ಭಯದಿಂದ ಮನೆಯತ್ತಿರ ಓಡಿಬಂದಿದ್ದಾರು ದಾಂಡಿಗರ ಗುಂಪು ಅಟ್ಟಿಸಿಕೊಂಡು ಬಂದು ಮನೆಯೊಳಗೆ ನುಗ್ಗಿದ್ದಾರೆ ತಮ್ಮಲ್ಲಿದ್ದ ಪಿಸ್ತೂಲ್ ಲಾಂಗುಗಳು ತೋರಿಸಿ ಮನೆಯಲ್ಲಿದ್ದ ಇಬ್ಬರು ಮಹಿಳೆಯರನ್ನು ಬೆದರಿಸಿದ ಖದೀಮರು ಮನೆ ಯಜಮಾನಿ ಹಾಕಿಕೊಂಡಿದ್ದ ಮಾಂಗಲ್ಯ,3 ಜೊತೆ ಓಲೆ,6 ಉಂಗುರ,1 ನಕ್ಲೆಸ್, 55 ಸಾವಿರ ಹಣವನ್ನು ತಗೆದುಕೊಂಡು ಹೋಗಿದ್ದಾರೆ.ಮನೆಯಲ್ಲಿದ್ದ ವಸ್ತುಗಳನ್ನು ಚಲ್ಲಾಪಿಲ್ಲಿ ಮಾಡಿದ್ದಾರೆ
ಘಟನಾ ಸ್ಥಳಕ್ಕೆ ಗೌನಿಪಲ್ಲಿ ಪೊಲೀಸರು ಭೇಟಿ ಕೊಟ್ಟು ಪರಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



