ತಿರುಪತಿ:ದಕ್ಷಿಣ ಭಾರತದ ಪ್ರಖ್ಯಾತ ರಾಹು-ಕೇತು ಪೂಜೆ ನಡೆಯುವ ಆಂಧ್ರದ ಶ್ರೀಕಾಳಹಸ್ತೀಶ್ವರ ದೇವಾಲಯದಲ್ಲಿ ಭಾನುವಾರ ನಡೆದಂತ ರಾಹು-ಕೇತು ಪೂಜೆಗಳು ಸಾರ್ವಕಾಲಿಕ ದಾಖಲೆಯಾಗಿದೆ.
ದೇವಸ್ಥಾನದಲ್ಲಿ ಐದು ವಿವಿಧ ಧರದ ಟಿಕೆಟ್ ಗಳಲ್ಲಿ ರಾಹು-ಕೇತು ಸರ್ಪದೋಷ ನಿವಾರಣಾ ಪೂಜೆಗಳು ನಡೆಯುತ್ತವೆ ರಾಹು-ಕೇತು ಪೂಜೆಗಳ ದಾಖಲೆ
ರಾಹು-ಕೇತು ಪೂಜಾ ಟಿಕೆಟ್ ಗಳು ಭಾನುವಾರ ಒಂದೇ ದಿನ 9,168 ಟಿಕೆಟ್ಗಳು ಮಾರಾಟವಾಗಿವೆ. 14 ತಿಂಗಳ ಹಿಂದೆ ಐದು ವಿಭಾಗಗಳಲ್ಲಿ ದಾಖಲೆಯ 7,200 ಟಿಕೆಟ್ಗಳು ಮಾರಾಟವಾಗಿದ್ದು, ಆಷಾಢ ಮಾಸದ ಭಾನುವಾರ ಅಮಾವಾಸ್ಯೆ ಬಂದಿದ್ದರಿಂದ ಜನತೆ ದೇವಾಲಯದಲ್ಲಿ ಪೂಜೆ ಮಾಡಲು ಮುಗಿಬಿದಿದ್ದು ಒಂದೇ ದಿನ 9,168 ರಾಹುಕೇತು ಪೂಜೆಯ ಟಿಕೆಟ್ ಮಾರಾಟವಾಗಿ ಹೊಸ ದಾಖಲೆ ನಿರ್ಮಿಸಿದೆ. ಶ್ರೀಕಾಳಹಸ್ತೀಶ್ವರ ದೇವಸ್ಥಾನದ ರಾಹುಕೇತು ಮಂಟಪಗಳು ಬೆಳಗ್ಗೆಯಿಂದ ಸಂಜೆಯವರೆಗೆ ಭಕ್ತರಿಂದ ತುಂಬಿ ತುಳುಕಾಡುತಿತ್ತು 5,000 ರೂ ಮೊತ್ತದ 154 ಟಿಕೆಟ್ ಗಳು,2,500 ರೂ ಮೊತ್ತದ 610ಟಿಕೆಟ್ ಗಳು,1,500 ರೂ ಮೊತ್ತದ 933ಟಿಕೆಟ್ ಗಳು,750 ರೂ ಮೊತ್ತದ 2,288 ಟಿಕೆಟ್ ಗಳು,500 ರೂ ಮೊತ್ತದ 5,183ಟಿಕೆಟ್ ಗಳು,,. ಸೇರಿ ಒಟ್ಟು 9,168 ರಾಹುಕೇತು ಪೂಜಾ ಟಿಕೆಟಗಳು ಮಾರಾಟವಾಗಿದೆ ಎನ್ನುತ್ತಾರೆ ದೇವಾಲಯದ ಇವಿಒಎಸ್ ಎನ್ ಮೂರ್ತಿ.
ಇದಲ್ಲದೆ, ಐದು ಬಗೆಯ ಪ್ರಸಾದಗಳ 29,505 ಪ್ಯಾಕೆಟ್ಗಳು ಮಾರಾಟವಾಗಿದ್ದು, ಇದು ಸಹ ದಾಖಲೆಯ ಮಾರಾಟ ಎನ್ನುತ್ತಾರೆ ಭಾನುವಾರವಷ್ಟೇ ದೇವಸ್ಥಾನಕ್ಕೆ ವಿವಿಧ ಪೂಜೆ, ಸೇವಾ ಟಿಕೆಟ್ ಗಳ ಮೂಲಕ ಸುಮಾರು ಎರಡು ಕೋಟಿ ಅದಾಯ ಬಂದಿದೆ ಎನ್ನುತ್ತಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



