ಶ್ರೀನಿವಾಸಪುರ:ಟೆಂಪೋ ಟ್ರಾವಲರ್ ಹಾಗು ಕಾರಿನ ನಡುವೆ ನಡೆದ ಬೀಕರ ರಸ್ತೆ ಅಪಘಾತದಲ್ಲಿ ಮೂರು ಮಂದಿ ಸಾವನಪ್ಪಿದ್ದು ಟೆಂಪೋ ಟ್ರಾವಲರ್ ನಲ್ಲಿದ್ದ 12 ಮಂದಿ ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತ ಬೆಂಗಳೂರು-ಮದನಪಲ್ಲಿ ರಸ್ತೆಯಲ್ಲಿ ದಂಡುಪಾಳ್ಯ ಗೇಟ್ ಬಳಿ ಶ್ರೀನಿವಾಸಪುರ ತಾಲೂಕಿನ ಗಡಿಯಂಚಿನಲ್ಲಿ ಬುಧವಾರ ಸಂಜೆ ನಡೆದಿದ್ದು ಆಂಧಪ್ರದೇಶದ ಬಾಯಿಕೊಂಡದಲ್ಲಿ ಪೂಜೆ ಮುಗಿಸಿ ಚಿಂತಾಮಣಿ ಕಡೆಗೆ ಬರುತ್ತಿದ್ದ ಟೆಂಪೋ ಟ್ರಾವಲರ್ ಹಾಗು ಮದನಪಲ್ಲಿಗೆ ಹೋರಟಿದ್ದ ಸ್ಯಾಂಟ್ರೊ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಕಾರಿನಲ್ಲಿದ್ದ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಶ್ರೀಕಾಂತ್, ಶ್ರೀನಿವಾಸಲು, ಪುಷ್ಪ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಅಪಘಾತ ಪ್ರಕರಣ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಅಪಘಾತ ಬೀಕರತೆ ಕೀ.ಮಿ ಗಟ್ಟಲೆ ಟ್ರಾಫಿಕ್ ಜಾಮ್
ವಾಹನಗಳ ಮುಖಾಮುಖಿ ಡಿಕ್ಕಿಯಾದ ಬೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಶವಗಳನ್ನು ಹೊರತಗೆಯಲು ಸಾಧ್ಯವಾಗದ ಹಿನ್ನಲೆಯಲ್ಲಿ ಜೆಸಿಬಿ ತರಸಿ ನುಜ್ಜುಗುಜ್ಜಾಗಿದ್ದ ಕಾರಿನ ಬಾಗಿಲುಗಳನ್ನು ಕಿತ್ತು ಹರಸಾಹಸ ಪಟ್ಟು ಮೃತ ದೇಹಗಳನ್ನು ಹೊರಗೆ ತಗೆದಿದ್ದು, ಇದರಿಂದಾಗಿ ಮದನಪಲ್ಲಿ ಹೈವೆ ರಸ್ತೆಯಲ್ಲಿ ಸುಮಾರು ಎರಡು ಗಂಟೆ ಕಾಲ ಎರಡು ಕಡೆ ಕೀ.ಮಿ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು.ಅಪಘಾತ ಪ್ರಕರಣ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಘಟನೆ ಕುರಿತು ಮಾಹಿತಿ ಪಡೆಯಲು ಚಿಕ್ಕಬಳ್ಳಾಪುರ ಜಿಲ್ಲಾ ಎಸ್ ಪಿ ಕುಶಾಲ್ ಚೌಕ್ಸೆ, ಎ.ಎಸ್.ಪಿ ಖಾಸಿಂರಜ. ಚಿಂತಾಮಣಿ ಡಿವೈಎಸ್ಪಿ ಮುರಳಿಧರ್.ಸರ್ಕಲ್ ಇನ್ಸಪೇಕ್ಟರ್ ಶಿವರಾಜ್.ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Monday, April 28