ಶ್ರೀನಿವಾಸಪುರ:ಪೋಲಿಸರೆಂದು ನಂಬಿಸಿ ವೃದ್ಧೆಯ ಮಾಂಗಲ್ಯ ಸರ ಅಪಹರಿಸಿರುವ ಘಟನೆ ಪಟ್ಟಣದ ಜನಬಿಡದಿ ವೃತ್ತ ಆಗಿರುವ ಪವನ್ ಆಸ್ಪತ್ರೆ ಬಳಿ ನಡೆದಿದೆ.
ಕಲ್ಲೂರು ಗ್ರಾಮದ ವೃದ್ದೆ ವೆಂಕಟಲಕ್ಷ್ಮಮ್ಮ ಮನೆಗೆ ಸರಕು ಖರೀದಿಸಲು ಆಸ್ಪತ್ರೆ ವೃತ್ತದ ಬಳಿ ನಡೆದು ಹೋಗುತ್ತಿರುವಾಗ ಅಪರಿಚಿತರು ವೆಂಕಟಲಕ್ಷ್ಮಮ್ಮನನ್ನು ಪರಿಚಿತರಂತೆ ಮಾತನಾಡಿ ಕಳ್ಳತನಗಳು ಹೆಚ್ಚಾಗುತ್ತಿವೆ ಮಾಂಗಲ್ಯ ಸರ ತೆಗೆದು ಬ್ಯಾಗ್ ನಲ್ಲಿ ಇಟ್ಟು ಕೊಳ್ಳಿ ಎಂದು ವೃದ್ದೆ ಕತ್ತಿನಲ್ಲಿದ್ದ ಬಂಗಾರದ ಸರವನ್ನು ತೆಗಿಸಿ ಬ್ಯಾಗ್ ನಲ್ಲಿ ಇಡಿಸಲು ಸಹಾಯ ಮಾಡುವರಂತೆ ಮಾಡಿ ಸರವನ್ನು ಎಗರಿಸಿದ್ದಾರೆ, ಇದಾದ ನಂತರ ಬ್ಯಾಗಲ್ಲಿ ಬಂಗಾರದ ಸರ ಇರುವುದನ್ನು ಖಾತ್ರಿ ಪಡಿಸಿಕೊಳ್ಳಲು ವೃದ್ದೆ ಪರಿಚಯಸ್ಥರ ಅಂಗಡಿ ಬಳಿ ಹೋಗಿ ಬ್ಯಾಗ್ ತಗೆದು ನೋಡಿದಾಗ ಮಾಂಗಲ್ಯ ಸರ ಇಲ್ಲದನ್ನು ನೋಡಿ ಗಾಭರಿಯಾಗಿದ್ದಾರೆ ಕೂಡಲೆ ಪರಿಚಯಸ್ಥರ ಮೂಲಕ ಪೊಲೀಸರಿಗೆ ಮಾಹಿತಿ ನೀಡಿದ್ದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶ್ರೀನಿವಾಸಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ವೃದ್ದೆ ಹೇಳುವಂತೆ ಪೊಲೀಸರೆಂದು ನಂಬಿಸಿ ಪರಿಚಯಸ್ಥರಂತೆ ನಟಿಸಿ ನಾನು ಧರಿಸಿದ್ದ 40ಗ್ರಾಂ ಮಾಂಗಲ್ಯ ಚೈನು 6.5 ಗ್ರಾಂ ತಾಳಿ ಬಟ್ಟುಗಳ ಅಂದಾಜು 3ಲಕ್ಷ ಮೌಲ್ಯದ ಸರವನ್ನು ನಂಬಿಸಿ ಮೋಸಮಾಡಿ ಯಾಮಾರಿಸಿದ್ದಾರೆ ಎಂದು ಅಲವತ್ತುಕೊಳ್ಳುತ್ತಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



