ಚಿಂತಾಮಣಿ:ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಾರ್ಡ್ ನಂ 7ರ.ಸದಸ್ಯ ಆರ್ ಜಗನ್ನಾಥ್, ಉಪಾಧ್ಯಕ್ಷರಾಗಿ ವಾರ್ಡ್ ನಂ:27 ರ ರಾಣಿಯಮ್ಮರವರು ಅವಿರೋಧ ಆಯ್ಕೆಯಾಗುವ ಮೂಲಕ ಕಾಂಗ್ರೆಸ್ ಅಧಿಕಾರ ಮುಂದುವರದಿದೆ.
ಇಂದು ನಡೆದ ಚಿಂತಾಮಣಿ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿದ್ದು ಚುನಾವಣಾ ಅಧಿಕಾರಿಯಾದ ಅಶ್ವಿನ್ ರವರು ಚುನಾವಣೆಯನ್ನು ನಡೆಸಿದ್ದು ಕಾಂಗ್ರೆಸ್ ಪಕ್ಷದ ಸದಸ್ಯ ಆರ್ ಜಗನ್ನಾಥ್, ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ರಾಣಿಯಮ್ಮ ನಾಮಪತ್ರ ಸಲ್ಲಿಸಿದ್ದು ಇತರೆ ಯಾರು ಸಹ ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಆವಿರೋಧವಾಗಿ ಆಯ್ಕೆಯಾದರು.
ಸಚಿವರಿಂದ ಶುಭಹಾರೈಕೆ
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಆವಿರೋಧವಾಗಿ ಆಯ್ಕೆ ಘೋಷಣೆಯಾದ ನಂತರ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ ಸಿ ಸುಧಾಕರ್ ರವರು ಕಾಂಗ್ರೆಸ್ ನಗರಸಭಾ ಸದಸ್ಯರೊಂದಿಗೆ ಆಗಮಿಸಿ ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಶುಭಕೋರಿ ಮಾತನಾಡಿ ಚಿಂತಾಮಣಿ ನಗರವನ್ನು ಅಭಿವೃದ್ಧಿ ಪಥದತ್ತ ತಗೆದುಕೊಂಡು ಹೋಗಲು ಪಕ್ಷಾತೀತವಾಗಿ ಶ್ರಮಿಸುವಂತೆ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಸೂಚಿಸಿದರು,ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಗರಸಭೆ ಮುಂಭಾಗ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಜಗದೀಶ್.ರಾಜಾಚಾರಿ. ಹರೀಶ್.ಅಕ್ಷಯ್,ಸೇರಿದಂತೆ ನಗರಸಭಾ ಸದಸ್ಯರು ಹಾಗು ಕಾಂಗ್ರೆಸ್ ಮುಖಂಡರುಗಳು ಇದ್ದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



