ಚಿಂತಾಮಣಿ:ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಾರ್ಡ್ ನಂ 7ರ.ಸದಸ್ಯ ಆರ್ ಜಗನ್ನಾಥ್, ಉಪಾಧ್ಯಕ್ಷರಾಗಿ ವಾರ್ಡ್ ನಂ:27 ರ ರಾಣಿಯಮ್ಮರವರು ಅವಿರೋಧ ಆಯ್ಕೆಯಾಗುವ ಮೂಲಕ ಕಾಂಗ್ರೆಸ್ ಅಧಿಕಾರ ಮುಂದುವರದಿದೆ.
ಇಂದು ನಡೆದ ಚಿಂತಾಮಣಿ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿದ್ದು ಚುನಾವಣಾ ಅಧಿಕಾರಿಯಾದ ಅಶ್ವಿನ್ ರವರು ಚುನಾವಣೆಯನ್ನು ನಡೆಸಿದ್ದು ಕಾಂಗ್ರೆಸ್ ಪಕ್ಷದ ಸದಸ್ಯ ಆರ್ ಜಗನ್ನಾಥ್, ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ರಾಣಿಯಮ್ಮ ನಾಮಪತ್ರ ಸಲ್ಲಿಸಿದ್ದು ಇತರೆ ಯಾರು ಸಹ ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಆವಿರೋಧವಾಗಿ ಆಯ್ಕೆಯಾದರು.
ಸಚಿವರಿಂದ ಶುಭಹಾರೈಕೆ
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಆವಿರೋಧವಾಗಿ ಆಯ್ಕೆ ಘೋಷಣೆಯಾದ ನಂತರ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ ಸಿ ಸುಧಾಕರ್ ರವರು ಕಾಂಗ್ರೆಸ್ ನಗರಸಭಾ ಸದಸ್ಯರೊಂದಿಗೆ ಆಗಮಿಸಿ ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಶುಭಕೋರಿ ಮಾತನಾಡಿ ಚಿಂತಾಮಣಿ ನಗರವನ್ನು ಅಭಿವೃದ್ಧಿ ಪಥದತ್ತ ತಗೆದುಕೊಂಡು ಹೋಗಲು ಪಕ್ಷಾತೀತವಾಗಿ ಶ್ರಮಿಸುವಂತೆ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಸೂಚಿಸಿದರು,ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಗರಸಭೆ ಮುಂಭಾಗ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಜಗದೀಶ್.ರಾಜಾಚಾರಿ. ಹರೀಶ್.ಅಕ್ಷಯ್,ಸೇರಿದಂತೆ ನಗರಸಭಾ ಸದಸ್ಯರು ಹಾಗು ಕಾಂಗ್ರೆಸ್ ಮುಖಂಡರುಗಳು ಇದ್ದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



