ಶ್ರೀನಿವಾಸಪುರ: ಪಟ್ಟಣದ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಘಟಕ(KSRTC Depo)ದಲ್ಲಿ ಸ್ಥಾಪಿಸಿದ್ದ ಗಣೇಶ ಮೂರ್ತಿಯನ್ನು ಆರು ದಿನಗಳಕಾಲ ಭಕ್ತಿಯಿಂದ ಪೂಜಿಸಿ ಭವ್ಯ ಮೆರವಣಿಗೆ ಮೂಲಕ ಕೊಂಡ್ಯೊಯ್ದು ವಿಧಿ ವಿಧಾನಗಳ ಮೂಲಕ ಶುಕ್ರವಾರ ವಿಸರ್ಜಿಸಲಾಯಿತು.
ಅರ್ಚಕರು ಗಣೇಶ ಮೂರ್ತಿಗಳಿಗೆ ವಿಧಿ ವಿಧಾನಗಳ ಮೂಲಕ ಪೂಜಾ ವಿಧಾನಗಳನ್ನು ನೆರವೇರಿಸಿದರು. ನಂತರ ವಿವಿಧ ಬಗೆಯ ಪುಷ್ಪಗಳಿಂದ ಅಲಂಕರಿಸಿದ ಪಲ್ಲಕಿ ರಥದಲ್ಲಿ ಗಣೇಶ ಮೂರ್ತಿಯನ್ನು ಭಕ್ತಿಭಾವದಿಂದ ಇಟ್ಟು ನಗರದ ಪ್ರಮುಖ ಸ್ಥಳಗಳಾದ ಮುಳಬಾಗಿಲು ವೃತ್ತ, ಎಂ.ಜಿ.ರಸ್ತೆ ಬಸ್ ಸ್ಟಾಂಡ್ ನಲ್ಲಿ ಇಂದಿರಾಭವನ್ ವೃತ್ತ, ಹೀಗೆ ಎಲ್ಲಾ ಕಡೆಗಳಲ್ಲೂ ಗಣೇಶನ ಉತ್ಸವಮೂರ್ತಿ ಭವ್ಯ ಮೆರವಣಿಗೆ ಸಾಗಿ ವಿಸರ್ಜನೆಗೆ ಕೊಂಡ್ಯೊಯಲಾಯಿತು.
ಡಿಜೆಗಳ ಅಬ್ಬರ ಇಲ್ಲದೆ KSRTC ನೌಕರರು ಕೇಸರಿ ಟೋಪಿ ಶಾಲು ಧರಸಿ ಡ್ರಮ್ಸ್ ಮತ್ತು ತಮಟೆ ಸದ್ದಿಗೆ ಹೆಜ್ಜೆಹಾಕಿ ನೃತ್ಯ ಮಾಡುತ್ತ ಮೆರವಣಿಗೆಯಲ್ಲಿ ಸಾಗುತ್ತ ಸಂಭ್ರಮಿಸಿದರು. ಮುಳಬಾಗಿಲು ತಾಲೂಕಿನ ವಾದ್ಯಗಾರರು ಡ್ರಮ್ಸ್ ಮತ್ತು ತಮಟೆಗಳನ್ನು ಅಚ್ಚುಕಟ್ಟಾಗಿ ಭಾರಿಸಿದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27