ಶ್ರೀನಿವಾಸಪುರ: ಪಟ್ಟಣದ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಘಟಕ(KSRTC Depo)ದಲ್ಲಿ ಸ್ಥಾಪಿಸಿದ್ದ ಗಣೇಶ ಮೂರ್ತಿಯನ್ನು ಆರು ದಿನಗಳಕಾಲ ಭಕ್ತಿಯಿಂದ ಪೂಜಿಸಿ ಭವ್ಯ ಮೆರವಣಿಗೆ ಮೂಲಕ ಕೊಂಡ್ಯೊಯ್ದು ವಿಧಿ ವಿಧಾನಗಳ ಮೂಲಕ ಶುಕ್ರವಾರ ವಿಸರ್ಜಿಸಲಾಯಿತು.
ಅರ್ಚಕರು ಗಣೇಶ ಮೂರ್ತಿಗಳಿಗೆ ವಿಧಿ ವಿಧಾನಗಳ ಮೂಲಕ ಪೂಜಾ ವಿಧಾನಗಳನ್ನು ನೆರವೇರಿಸಿದರು. ನಂತರ ವಿವಿಧ ಬಗೆಯ ಪುಷ್ಪಗಳಿಂದ ಅಲಂಕರಿಸಿದ ಪಲ್ಲಕಿ ರಥದಲ್ಲಿ ಗಣೇಶ ಮೂರ್ತಿಯನ್ನು ಭಕ್ತಿಭಾವದಿಂದ ಇಟ್ಟು ನಗರದ ಪ್ರಮುಖ ಸ್ಥಳಗಳಾದ ಮುಳಬಾಗಿಲು ವೃತ್ತ, ಎಂ.ಜಿ.ರಸ್ತೆ ಬಸ್ ಸ್ಟಾಂಡ್ ನಲ್ಲಿ ಇಂದಿರಾಭವನ್ ವೃತ್ತ, ಹೀಗೆ ಎಲ್ಲಾ ಕಡೆಗಳಲ್ಲೂ ಗಣೇಶನ ಉತ್ಸವಮೂರ್ತಿ ಭವ್ಯ ಮೆರವಣಿಗೆ ಸಾಗಿ ವಿಸರ್ಜನೆಗೆ ಕೊಂಡ್ಯೊಯಲಾಯಿತು.
ಡಿಜೆಗಳ ಅಬ್ಬರ ಇಲ್ಲದೆ KSRTC ನೌಕರರು ಕೇಸರಿ ಟೋಪಿ ಶಾಲು ಧರಸಿ ಡ್ರಮ್ಸ್ ಮತ್ತು ತಮಟೆ ಸದ್ದಿಗೆ ಹೆಜ್ಜೆಹಾಕಿ ನೃತ್ಯ ಮಾಡುತ್ತ ಮೆರವಣಿಗೆಯಲ್ಲಿ ಸಾಗುತ್ತ ಸಂಭ್ರಮಿಸಿದರು. ಮುಳಬಾಗಿಲು ತಾಲೂಕಿನ ವಾದ್ಯಗಾರರು ಡ್ರಮ್ಸ್ ಮತ್ತು ತಮಟೆಗಳನ್ನು ಅಚ್ಚುಕಟ್ಟಾಗಿ ಭಾರಿಸಿದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



