ಶ್ರೀನಿವಾಸಪುರ: ಪಟ್ಟಣದ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಘಟಕ(KSRTC Depo)ದಲ್ಲಿ ಸ್ಥಾಪಿಸಿದ್ದ ಗಣೇಶ ಮೂರ್ತಿಯನ್ನು ಆರು ದಿನಗಳಕಾಲ ಭಕ್ತಿಯಿಂದ ಪೂಜಿಸಿ ಭವ್ಯ ಮೆರವಣಿಗೆ ಮೂಲಕ ಕೊಂಡ್ಯೊಯ್ದು ವಿಧಿ ವಿಧಾನಗಳ ಮೂಲಕ ಶುಕ್ರವಾರ ವಿಸರ್ಜಿಸಲಾಯಿತು.
ಅರ್ಚಕರು ಗಣೇಶ ಮೂರ್ತಿಗಳಿಗೆ ವಿಧಿ ವಿಧಾನಗಳ ಮೂಲಕ ಪೂಜಾ ವಿಧಾನಗಳನ್ನು ನೆರವೇರಿಸಿದರು. ನಂತರ ವಿವಿಧ ಬಗೆಯ ಪುಷ್ಪಗಳಿಂದ ಅಲಂಕರಿಸಿದ ಪಲ್ಲಕಿ ರಥದಲ್ಲಿ ಗಣೇಶ ಮೂರ್ತಿಯನ್ನು ಭಕ್ತಿಭಾವದಿಂದ ಇಟ್ಟು ನಗರದ ಪ್ರಮುಖ ಸ್ಥಳಗಳಾದ ಮುಳಬಾಗಿಲು ವೃತ್ತ, ಎಂ.ಜಿ.ರಸ್ತೆ ಬಸ್ ಸ್ಟಾಂಡ್ ನಲ್ಲಿ ಇಂದಿರಾಭವನ್ ವೃತ್ತ, ಹೀಗೆ ಎಲ್ಲಾ ಕಡೆಗಳಲ್ಲೂ ಗಣೇಶನ ಉತ್ಸವಮೂರ್ತಿ ಭವ್ಯ ಮೆರವಣಿಗೆ ಸಾಗಿ ವಿಸರ್ಜನೆಗೆ ಕೊಂಡ್ಯೊಯಲಾಯಿತು.
ಡಿಜೆಗಳ ಅಬ್ಬರ ಇಲ್ಲದೆ KSRTC ನೌಕರರು ಕೇಸರಿ ಟೋಪಿ ಶಾಲು ಧರಸಿ ಡ್ರಮ್ಸ್ ಮತ್ತು ತಮಟೆ ಸದ್ದಿಗೆ ಹೆಜ್ಜೆಹಾಕಿ ನೃತ್ಯ ಮಾಡುತ್ತ ಮೆರವಣಿಗೆಯಲ್ಲಿ ಸಾಗುತ್ತ ಸಂಭ್ರಮಿಸಿದರು. ಮುಳಬಾಗಿಲು ತಾಲೂಕಿನ ವಾದ್ಯಗಾರರು ಡ್ರಮ್ಸ್ ಮತ್ತು ತಮಟೆಗಳನ್ನು ಅಚ್ಚುಕಟ್ಟಾಗಿ ಭಾರಿಸಿದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



