ಬೆಂಗಳೂರು:ಬೆಂಗಳೂರು ನಗರದ ಹೊರವಲಯ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಹಲವು ದಿನಗಳಿಂದ ಸಾರ್ವಜನಿಕವಾಗಿ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.
ಕೆಲ ದಿನಗಳ ಹಿಂದೆ ಚಿರತೆಯೊಂದು ಹೆದ್ದಾರಿ ಕ್ರಾಸ್ ಮಾಡುತ್ತಿರುವ ದೃಶ್ಯ ಸೆರೆಯಾಗಿತ್ತು. ಇದರೊಂದಿಗೆ ಐಟಿಬಿಟಿಗೆ ಖ್ಯಾತಿ ಪಡೆದು ಹಲವಾರು ಸಾಫ್ಟ್ವೇರ್ ಸಂಸ್ಥೆಗಳು ಇರುವ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸ್ಥಳೀಯರು ಹಾಗೂ ಟೆಕ್ಕಿಗಳು ಆತಂಕಕ್ಕೆ ಒಳಗಾಗಿದ್ದರು.
ಚಿರತೆ ಓಡಾಟದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಕ್ಯಾಮರಾಗಳನ್ನ ಅಳವಡಿಸಿ ಚಿರತೆ ಓಡಾಟದ ಬಗ್ಗೆ ನಿಗಾ ವಹಿಸಿದ್ದರು.ಕ್ಯಾಮೆರಾದಲ್ಲಿ ಹಲವು ಕಡೆಗಳಲ್ಲಿ ಚಿರತೆ ಓಡಾಟ ಕಂಡು ಬಂದಿದ್ದು ಅದರ ಜಾಡು ಹಿಡಿದು ಅರಣ್ಯ ಇಲಾಖೆ ಸಿಬ್ಬಂದಿ ಮೂರು ಬೋನ್ ಗಳನ್ನ ಇಟ್ಟು ಸೆರೆಗೆ ಕಾರ್ಯಾಚರಣೆ ನಡೆಸಿದ್ದರು. ಎಲೆಕ್ಟ್ರಾನಿಕ್ ಸಿಟಿಯ ಎಲಿಪ್ಯಾಡ್ ಜಾಗದಲ್ಲಿ ಹೆಚ್ಚಾಗಿ ಓಡಾಡುತ್ತಿದ್ದ ಚಿರತೆ, ಅಲ್ಲಿ ನಿರ್ಜನ ಪ್ರದೇಶದಲ್ಲಿಯೇ ಹೆಚ್ಚಾಗಿ ಬಿಡುಬಿಟ್ಟಿರುವುದು ಖಚಿತವಾಗಿ ಎಲಿಪ್ಯಾಡ್ ಜಾಗದಲ್ಲಿ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.ಬೋನಿಗೆ ಬಿದ್ದಿರುವ ಚಿರತೆಗೆ ಐದು ವರ್ಷದ ಗಂಡು ಚಿರತೆ ಎಂದು ಅರಣ್ಯ ಇಲಾಖೆ ಗುರುತಿಸಿದ್ದು ಸೆರೆಯಾಗಿರುವ ಚಿರತೆಯನ್ನು ಬನ್ನೆರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡಲು ಚಿಂತನೆ ನಡೆಸಿದೆ
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



