ಬೆಂಗಳೂರು:ಬೆಂಗಳೂರು ನಗರದ ಹೊರವಲಯ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಹಲವು ದಿನಗಳಿಂದ ಸಾರ್ವಜನಿಕವಾಗಿ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.
ಕೆಲ ದಿನಗಳ ಹಿಂದೆ ಚಿರತೆಯೊಂದು ಹೆದ್ದಾರಿ ಕ್ರಾಸ್ ಮಾಡುತ್ತಿರುವ ದೃಶ್ಯ ಸೆರೆಯಾಗಿತ್ತು. ಇದರೊಂದಿಗೆ ಐಟಿಬಿಟಿಗೆ ಖ್ಯಾತಿ ಪಡೆದು ಹಲವಾರು ಸಾಫ್ಟ್ವೇರ್ ಸಂಸ್ಥೆಗಳು ಇರುವ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸ್ಥಳೀಯರು ಹಾಗೂ ಟೆಕ್ಕಿಗಳು ಆತಂಕಕ್ಕೆ ಒಳಗಾಗಿದ್ದರು.
ಚಿರತೆ ಓಡಾಟದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಕ್ಯಾಮರಾಗಳನ್ನ ಅಳವಡಿಸಿ ಚಿರತೆ ಓಡಾಟದ ಬಗ್ಗೆ ನಿಗಾ ವಹಿಸಿದ್ದರು.ಕ್ಯಾಮೆರಾದಲ್ಲಿ ಹಲವು ಕಡೆಗಳಲ್ಲಿ ಚಿರತೆ ಓಡಾಟ ಕಂಡು ಬಂದಿದ್ದು ಅದರ ಜಾಡು ಹಿಡಿದು ಅರಣ್ಯ ಇಲಾಖೆ ಸಿಬ್ಬಂದಿ ಮೂರು ಬೋನ್ ಗಳನ್ನ ಇಟ್ಟು ಸೆರೆಗೆ ಕಾರ್ಯಾಚರಣೆ ನಡೆಸಿದ್ದರು. ಎಲೆಕ್ಟ್ರಾನಿಕ್ ಸಿಟಿಯ ಎಲಿಪ್ಯಾಡ್ ಜಾಗದಲ್ಲಿ ಹೆಚ್ಚಾಗಿ ಓಡಾಡುತ್ತಿದ್ದ ಚಿರತೆ, ಅಲ್ಲಿ ನಿರ್ಜನ ಪ್ರದೇಶದಲ್ಲಿಯೇ ಹೆಚ್ಚಾಗಿ ಬಿಡುಬಿಟ್ಟಿರುವುದು ಖಚಿತವಾಗಿ ಎಲಿಪ್ಯಾಡ್ ಜಾಗದಲ್ಲಿ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.ಬೋನಿಗೆ ಬಿದ್ದಿರುವ ಚಿರತೆಗೆ ಐದು ವರ್ಷದ ಗಂಡು ಚಿರತೆ ಎಂದು ಅರಣ್ಯ ಇಲಾಖೆ ಗುರುತಿಸಿದ್ದು ಸೆರೆಯಾಗಿರುವ ಚಿರತೆಯನ್ನು ಬನ್ನೆರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡಲು ಚಿಂತನೆ ನಡೆಸಿದೆ
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



