ಶ್ರೀನಿವಾಸಪುರ:ಇದೊಂದು ಹೃದಯ ವಿದ್ರಾಯಕ ಮನ ಕಲಕುವ ಘಟನೆ ನಡೆದಿದ್ದು ಹುಟ್ಟಿದ ಏಳೇ ದಿನಕ್ಕೆ ಹೆತ್ತವರನ್ನು ಕಳೆದುಕೊಂಡ ಕಂದಮ್ಮನ ಕಥೆ.
ಹೆತ್ತ ಏಳು ದಿನದ ಹಸುಕಂದನನ್ನು ಅನಾಥವಾಗಿಸಿ ಅಸ್ಸಾಂ ಮೂಲದ ಯುವ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಗುವಿನ ಜನನದ ಸಂಭ್ರಮ ಮಾಸುವ ಮುನ್ನವೇ ಆತ್ಮಹತ್ಯೆ ಮಾಡಿಕೊಂಡಿರುವ ಮಗುವಿನ ಹೆತ್ತವರು ಕೃತ್ಯ ಮರುಕ ಮೂಡಿಸಿದೆ.
ತಾಲ್ಲೂಕಿನ ಉಪ್ಪರಪಲ್ಲಿ ಗ್ರಾಮದ ಶ್ರೀನಿವಾಸರೆಡ್ಡಿ ಎಂಬುವವರ ಕೋಳಿ ಫಾರಂನಲ್ಲಿ ಕೆಲಸಕ್ಕಾಗಿ ದೂರದ ಅಸ್ಸಾಂನಿಂದ ಬಂದಿದ್ದ ಫರಿಜಾ (22) ಮತ್ತು ರೆಹಮಾನ್ (28) ದಂಪತಿ ಸುಮಾರು ಹದಿನೈದು ದಿನಗಳಿಂದ ಫಾರಂ ಸಮೀಪ ವಾಸವಾಗಿದ್ದರು. ಸರಿಯಾಗಿ ಏಳು ದಿನಗಳ ಹಿಂದಷ್ಟೇ ಫರಿಜಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ಬದುಕಿಲ್ಲಿ ಸಂತಸ ಪಡಬೇಕಿದ್ದ ಸಮಯದಲ್ಲಿ ದಂಪತಿ ಆತ್ಮಹತ್ಯೆಯಂತ ವಿಪರೀತ ನಿರ್ಧಾರಕ್ಕೆ ಮುಂದಾಗಲು ಕಾರಣವಾದರು ಏನು ಎಂಬುದು ಸ್ಥಳೀಯರ ಪ್ರಶ್ನೆ?
ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಘಟನಾ ಸ್ಥಳಕ್ಕೆ ರಾಯಲ್ಪಾಡು ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶ್ರೀನಿವಾಸಪುರ ಆಸ್ಪತ್ರೆಗೆ ರವಾನಿಸಲಾಗಿದೆ.ಮಗುವನ್ನು ಕೋಲಾರ ಜಿಲ್ಲಾಸ್ಪತ್ರೆಗೆ ರವಾನಿಸಿ ಪೋಷಣೆ ಮಾಡಲಾಗುತ್ತಿದ್ದು ಸಂಬಂಧಿಕರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



