ಶ್ರೀನಿವಾಸಪುರ:ಇದೊಂದು ಹೃದಯ ವಿದ್ರಾಯಕ ಮನ ಕಲಕುವ ಘಟನೆ ನಡೆದಿದ್ದು ಹುಟ್ಟಿದ ಏಳೇ ದಿನಕ್ಕೆ ಹೆತ್ತವರನ್ನು ಕಳೆದುಕೊಂಡ ಕಂದಮ್ಮನ ಕಥೆ.
ಹೆತ್ತ ಏಳು ದಿನದ ಹಸುಕಂದನನ್ನು ಅನಾಥವಾಗಿಸಿ ಅಸ್ಸಾಂ ಮೂಲದ ಯುವ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಗುವಿನ ಜನನದ ಸಂಭ್ರಮ ಮಾಸುವ ಮುನ್ನವೇ ಆತ್ಮಹತ್ಯೆ ಮಾಡಿಕೊಂಡಿರುವ ಮಗುವಿನ ಹೆತ್ತವರು ಕೃತ್ಯ ಮರುಕ ಮೂಡಿಸಿದೆ.
ತಾಲ್ಲೂಕಿನ ಉಪ್ಪರಪಲ್ಲಿ ಗ್ರಾಮದ ಶ್ರೀನಿವಾಸರೆಡ್ಡಿ ಎಂಬುವವರ ಕೋಳಿ ಫಾರಂನಲ್ಲಿ ಕೆಲಸಕ್ಕಾಗಿ ದೂರದ ಅಸ್ಸಾಂನಿಂದ ಬಂದಿದ್ದ ಫರಿಜಾ (22) ಮತ್ತು ರೆಹಮಾನ್ (28) ದಂಪತಿ ಸುಮಾರು ಹದಿನೈದು ದಿನಗಳಿಂದ ಫಾರಂ ಸಮೀಪ ವಾಸವಾಗಿದ್ದರು. ಸರಿಯಾಗಿ ಏಳು ದಿನಗಳ ಹಿಂದಷ್ಟೇ ಫರಿಜಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ಬದುಕಿಲ್ಲಿ ಸಂತಸ ಪಡಬೇಕಿದ್ದ ಸಮಯದಲ್ಲಿ ದಂಪತಿ ಆತ್ಮಹತ್ಯೆಯಂತ ವಿಪರೀತ ನಿರ್ಧಾರಕ್ಕೆ ಮುಂದಾಗಲು ಕಾರಣವಾದರು ಏನು ಎಂಬುದು ಸ್ಥಳೀಯರ ಪ್ರಶ್ನೆ?
ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಘಟನಾ ಸ್ಥಳಕ್ಕೆ ರಾಯಲ್ಪಾಡು ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶ್ರೀನಿವಾಸಪುರ ಆಸ್ಪತ್ರೆಗೆ ರವಾನಿಸಲಾಗಿದೆ.ಮಗುವನ್ನು ಕೋಲಾರ ಜಿಲ್ಲಾಸ್ಪತ್ರೆಗೆ ರವಾನಿಸಿ ಪೋಷಣೆ ಮಾಡಲಾಗುತ್ತಿದ್ದು ಸಂಬಂಧಿಕರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



