ನ್ಯೂಜ್ ಡೆಸ್ಕ್:ಪ್ರಿಯತಮೆಯೊಂದಿಗೆ ವಿವಾಹಕ್ಕೆ ಅಡ್ಡಿಪಡಿಸಿದ ಎಂದು ಪ್ರಿಯತಮೆಯ ತಂದೆಯ ಮೇಲೆ ಪಾಗಲ್ ಪ್ರೇಮಿ ಗುಂಡು ಹಾರಿಸಿರುವ ಘಟನೆ ನಡೆದಿದೆ.
ಇದರಿಂದ ಪ್ರಿಯತಮೆಯ ತಂದೆ ರೇವಂತ್ ಆನಂದ್ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೈದರಾಬಾದ್ ನಗರದಲ್ಲಿ ನಡೆದಿದೆ.ಘಟನೆಯ ವಿವರಕ್ಕೆ ಹೋದರೆ ಹೈದರಾಬಾದ್ ನಗರದ ಅಂಬರ್ ಪೇಟೆಯ ಭಾಗದ ಬಲ್ವಿಂದರ್ ಸಿಂಗ್ (25) ಹಾಗೂ ಸರೂರ್ನಗರ ವ್ಯಾಪ್ತಿಯ ವೆಂಕಟೇಶ್ವರ ಕಾಲೋನಿಯ ಯುವತಿ (23) ಕೆಲ ದಿನಗಳಿಂದ ಪ್ರಿತಿಸುತ್ತಿದ್ದರು.ವಿಷಯ ತಿಳಿದುಕೊಂಡ ಯುವತಿ ತಂದೆ ಇದನ್ನು ವಿರೋಧಿಸಿ ಯುವತಿಯನ್ನು ಅಮೆರಿಕಕ್ಕೆ ಕಳುಹಿಸಿದ್ದಾರೆ ಇದನ್ನು ತಿಳಿದುಕೊಂಡ ಪ್ರೇಮಿ ಬಲ್ವಿಂದರ್ ಸಿಂಗ್ ಬಾಲಕಿಯ ತಂದೆ ರೇವಂತ್ ಆನಂದ್ ಜತೆ ವಾಗ್ವಾದಕ್ಕೆ ಇಳಿದಿದ್ದಾನೆ. ಮಾತಿಗೆ ಮಾತು ಬೆಳದಿದೆ ತನ್ನೊಂದಿಗೆ ತಂದಿದ್ದ ಏರ್ ಗನ್ ನಿಂದ ಯುವತಿ ತಂದೆ ರೇವಂತ್ ಆನಂದ್ ಮೇಲೆ ಗುಂಡು ಹಾರಿಸಿದ್ದಾನೆ.ಗುಂಡು ರೇವಂತ್ ಆನಂದ್ ಕಣ್ಣಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಬಂಧಿಸಿದ್ದಾರೆ. ರೇವಂತ್ ಆನಂದ್ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



