ನ್ಯೂಜ್ ಡೆಸ್ಕ್:ಪ್ರಿಯತಮೆಯೊಂದಿಗೆ ವಿವಾಹಕ್ಕೆ ಅಡ್ಡಿಪಡಿಸಿದ ಎಂದು ಪ್ರಿಯತಮೆಯ ತಂದೆಯ ಮೇಲೆ ಪಾಗಲ್ ಪ್ರೇಮಿ ಗುಂಡು ಹಾರಿಸಿರುವ ಘಟನೆ ನಡೆದಿದೆ.
ಇದರಿಂದ ಪ್ರಿಯತಮೆಯ ತಂದೆ ರೇವಂತ್ ಆನಂದ್ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೈದರಾಬಾದ್ ನಗರದಲ್ಲಿ ನಡೆದಿದೆ.ಘಟನೆಯ ವಿವರಕ್ಕೆ ಹೋದರೆ ಹೈದರಾಬಾದ್ ನಗರದ ಅಂಬರ್ ಪೇಟೆಯ ಭಾಗದ ಬಲ್ವಿಂದರ್ ಸಿಂಗ್ (25) ಹಾಗೂ ಸರೂರ್ನಗರ ವ್ಯಾಪ್ತಿಯ ವೆಂಕಟೇಶ್ವರ ಕಾಲೋನಿಯ ಯುವತಿ (23) ಕೆಲ ದಿನಗಳಿಂದ ಪ್ರಿತಿಸುತ್ತಿದ್ದರು.ವಿಷಯ ತಿಳಿದುಕೊಂಡ ಯುವತಿ ತಂದೆ ಇದನ್ನು ವಿರೋಧಿಸಿ ಯುವತಿಯನ್ನು ಅಮೆರಿಕಕ್ಕೆ ಕಳುಹಿಸಿದ್ದಾರೆ ಇದನ್ನು ತಿಳಿದುಕೊಂಡ ಪ್ರೇಮಿ ಬಲ್ವಿಂದರ್ ಸಿಂಗ್ ಬಾಲಕಿಯ ತಂದೆ ರೇವಂತ್ ಆನಂದ್ ಜತೆ ವಾಗ್ವಾದಕ್ಕೆ ಇಳಿದಿದ್ದಾನೆ. ಮಾತಿಗೆ ಮಾತು ಬೆಳದಿದೆ ತನ್ನೊಂದಿಗೆ ತಂದಿದ್ದ ಏರ್ ಗನ್ ನಿಂದ ಯುವತಿ ತಂದೆ ರೇವಂತ್ ಆನಂದ್ ಮೇಲೆ ಗುಂಡು ಹಾರಿಸಿದ್ದಾನೆ.ಗುಂಡು ರೇವಂತ್ ಆನಂದ್ ಕಣ್ಣಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಬಂಧಿಸಿದ್ದಾರೆ. ರೇವಂತ್ ಆನಂದ್ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27