ನ್ಯೂಜ್ ಡೆಸ್ಕ್:ಪ್ರಿಯತಮೆಯೊಂದಿಗೆ ವಿವಾಹಕ್ಕೆ ಅಡ್ಡಿಪಡಿಸಿದ ಎಂದು ಪ್ರಿಯತಮೆಯ ತಂದೆಯ ಮೇಲೆ ಪಾಗಲ್ ಪ್ರೇಮಿ ಗುಂಡು ಹಾರಿಸಿರುವ ಘಟನೆ ನಡೆದಿದೆ.
ಇದರಿಂದ ಪ್ರಿಯತಮೆಯ ತಂದೆ ರೇವಂತ್ ಆನಂದ್ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೈದರಾಬಾದ್ ನಗರದಲ್ಲಿ ನಡೆದಿದೆ.ಘಟನೆಯ ವಿವರಕ್ಕೆ ಹೋದರೆ ಹೈದರಾಬಾದ್ ನಗರದ ಅಂಬರ್ ಪೇಟೆಯ ಭಾಗದ ಬಲ್ವಿಂದರ್ ಸಿಂಗ್ (25) ಹಾಗೂ ಸರೂರ್ನಗರ ವ್ಯಾಪ್ತಿಯ ವೆಂಕಟೇಶ್ವರ ಕಾಲೋನಿಯ ಯುವತಿ (23) ಕೆಲ ದಿನಗಳಿಂದ ಪ್ರಿತಿಸುತ್ತಿದ್ದರು.ವಿಷಯ ತಿಳಿದುಕೊಂಡ ಯುವತಿ ತಂದೆ ಇದನ್ನು ವಿರೋಧಿಸಿ ಯುವತಿಯನ್ನು ಅಮೆರಿಕಕ್ಕೆ ಕಳುಹಿಸಿದ್ದಾರೆ ಇದನ್ನು ತಿಳಿದುಕೊಂಡ ಪ್ರೇಮಿ ಬಲ್ವಿಂದರ್ ಸಿಂಗ್ ಬಾಲಕಿಯ ತಂದೆ ರೇವಂತ್ ಆನಂದ್ ಜತೆ ವಾಗ್ವಾದಕ್ಕೆ ಇಳಿದಿದ್ದಾನೆ. ಮಾತಿಗೆ ಮಾತು ಬೆಳದಿದೆ ತನ್ನೊಂದಿಗೆ ತಂದಿದ್ದ ಏರ್ ಗನ್ ನಿಂದ ಯುವತಿ ತಂದೆ ರೇವಂತ್ ಆನಂದ್ ಮೇಲೆ ಗುಂಡು ಹಾರಿಸಿದ್ದಾನೆ.ಗುಂಡು ರೇವಂತ್ ಆನಂದ್ ಕಣ್ಣಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಬಂಧಿಸಿದ್ದಾರೆ. ರೇವಂತ್ ಆನಂದ್ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Saturday, June 14