ನ್ಯೂಜ್ ಡೆಸ್ಕ್:ಪ್ರಿಯತಮೆಯೊಂದಿಗೆ ವಿವಾಹಕ್ಕೆ ಅಡ್ಡಿಪಡಿಸಿದ ಎಂದು ಪ್ರಿಯತಮೆಯ ತಂದೆಯ ಮೇಲೆ ಪಾಗಲ್ ಪ್ರೇಮಿ ಗುಂಡು ಹಾರಿಸಿರುವ ಘಟನೆ ನಡೆದಿದೆ.
ಇದರಿಂದ ಪ್ರಿಯತಮೆಯ ತಂದೆ ರೇವಂತ್ ಆನಂದ್ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೈದರಾಬಾದ್ ನಗರದಲ್ಲಿ ನಡೆದಿದೆ.ಘಟನೆಯ ವಿವರಕ್ಕೆ ಹೋದರೆ ಹೈದರಾಬಾದ್ ನಗರದ ಅಂಬರ್ ಪೇಟೆಯ ಭಾಗದ ಬಲ್ವಿಂದರ್ ಸಿಂಗ್ (25) ಹಾಗೂ ಸರೂರ್ನಗರ ವ್ಯಾಪ್ತಿಯ ವೆಂಕಟೇಶ್ವರ ಕಾಲೋನಿಯ ಯುವತಿ (23) ಕೆಲ ದಿನಗಳಿಂದ ಪ್ರಿತಿಸುತ್ತಿದ್ದರು.ವಿಷಯ ತಿಳಿದುಕೊಂಡ ಯುವತಿ ತಂದೆ ಇದನ್ನು ವಿರೋಧಿಸಿ ಯುವತಿಯನ್ನು ಅಮೆರಿಕಕ್ಕೆ ಕಳುಹಿಸಿದ್ದಾರೆ ಇದನ್ನು ತಿಳಿದುಕೊಂಡ ಪ್ರೇಮಿ ಬಲ್ವಿಂದರ್ ಸಿಂಗ್ ಬಾಲಕಿಯ ತಂದೆ ರೇವಂತ್ ಆನಂದ್ ಜತೆ ವಾಗ್ವಾದಕ್ಕೆ ಇಳಿದಿದ್ದಾನೆ. ಮಾತಿಗೆ ಮಾತು ಬೆಳದಿದೆ ತನ್ನೊಂದಿಗೆ ತಂದಿದ್ದ ಏರ್ ಗನ್ ನಿಂದ ಯುವತಿ ತಂದೆ ರೇವಂತ್ ಆನಂದ್ ಮೇಲೆ ಗುಂಡು ಹಾರಿಸಿದ್ದಾನೆ.ಗುಂಡು ರೇವಂತ್ ಆನಂದ್ ಕಣ್ಣಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಬಂಧಿಸಿದ್ದಾರೆ. ರೇವಂತ್ ಆನಂದ್ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



