ನ್ಯೂಜ್ ಡೆಸ್ಕ್:ಪ್ರಿಯತಮೆಯೊಂದಿಗೆ ವಿವಾಹಕ್ಕೆ ಅಡ್ಡಿಪಡಿಸಿದ ಎಂದು ಪ್ರಿಯತಮೆಯ ತಂದೆಯ ಮೇಲೆ ಪಾಗಲ್ ಪ್ರೇಮಿ ಗುಂಡು ಹಾರಿಸಿರುವ ಘಟನೆ ನಡೆದಿದೆ.
ಇದರಿಂದ ಪ್ರಿಯತಮೆಯ ತಂದೆ ರೇವಂತ್ ಆನಂದ್ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೈದರಾಬಾದ್ ನಗರದಲ್ಲಿ ನಡೆದಿದೆ.ಘಟನೆಯ ವಿವರಕ್ಕೆ ಹೋದರೆ ಹೈದರಾಬಾದ್ ನಗರದ ಅಂಬರ್ ಪೇಟೆಯ ಭಾಗದ ಬಲ್ವಿಂದರ್ ಸಿಂಗ್ (25) ಹಾಗೂ ಸರೂರ್ನಗರ ವ್ಯಾಪ್ತಿಯ ವೆಂಕಟೇಶ್ವರ ಕಾಲೋನಿಯ ಯುವತಿ (23) ಕೆಲ ದಿನಗಳಿಂದ ಪ್ರಿತಿಸುತ್ತಿದ್ದರು.ವಿಷಯ ತಿಳಿದುಕೊಂಡ ಯುವತಿ ತಂದೆ ಇದನ್ನು ವಿರೋಧಿಸಿ ಯುವತಿಯನ್ನು ಅಮೆರಿಕಕ್ಕೆ ಕಳುಹಿಸಿದ್ದಾರೆ ಇದನ್ನು ತಿಳಿದುಕೊಂಡ ಪ್ರೇಮಿ ಬಲ್ವಿಂದರ್ ಸಿಂಗ್ ಬಾಲಕಿಯ ತಂದೆ ರೇವಂತ್ ಆನಂದ್ ಜತೆ ವಾಗ್ವಾದಕ್ಕೆ ಇಳಿದಿದ್ದಾನೆ. ಮಾತಿಗೆ ಮಾತು ಬೆಳದಿದೆ ತನ್ನೊಂದಿಗೆ ತಂದಿದ್ದ ಏರ್ ಗನ್ ನಿಂದ ಯುವತಿ ತಂದೆ ರೇವಂತ್ ಆನಂದ್ ಮೇಲೆ ಗುಂಡು ಹಾರಿಸಿದ್ದಾನೆ.ಗುಂಡು ರೇವಂತ್ ಆನಂದ್ ಕಣ್ಣಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಬಂಧಿಸಿದ್ದಾರೆ. ರೇವಂತ್ ಆನಂದ್ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



