ಚಿಂತಾಮಣಿ:ಚಿಂತಾಮಣಿ-ಹೊಸಕೋಟೆ ಹೆದ್ದಾರಿಯಲ್ಲಿ APSRTC ಬಸ್ಸು ಹಾಗೂ ಸಿಲಿಂಡರ್ ತುಂಬಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿ ಬಸ್ಸಿನಲ್ಲಿದ್ದ ಹಲವರು ಗಾಯಗೊಂಡ ಘಟನೆ ಸಂತೇಕಲ್ಲಹಳ್ಳಿ ಗೇಟ್ ಸಮೀಪ ಇಂದು ನಡೆದಿದೆ.
ಆಂಧ್ರದ ಕಡಪದಿಂದ ಬೆಂಗಳೂರಿಗೆ ಹೋಗುತ್ತಿದ್ದ ಆಂಧ್ರದ ಸಾರಿಗೆ ಸಂಸ್ಥೆ ಬಸ್ಸು ಮತ್ತು ಚಿಂತಾಮಣಿ ಕಡೆಗೆ ಬರುತ್ತಿದ್ದ ಸಿಲಿಂಡರ್ ತುಂಬಿದ್ದ ಲಾರಿ ಸಂತೇಕಲ್ಲಹಳ್ಳಿ ಗೇಟ್ ಸಮೀಪ ಡಿಕ್ಕಿಯಾಗಿದೆ ಲಾರಿಯಲ್ಲಿದ್ದ ನೂರಾರು ಅಡುಗೆ ಸಿಲಿಂಡರ್ ಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅಪಘಾತದಲ್ಲಿ ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣ ನಷ್ಟದ ಅನಾಹುತ ಸಂಭವಿಸಿಲ್ಲ.
ಬಸ್ಸಿನಲ್ಲಿದ್ದ ನಿತ್ಯ ಪೂಜಿತ್(19 ವರ್ಷ)ಅರುಣಮ್ಮ(40 ವರ್ಷ)ವೆಂಕಟೇಶ್ (60 ವರ್ಷ) ಇವರು ಗಾಯಗೊಂಡು ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಂಭೀರವಾಗಿ ಗಾಯಗೊಂಡ ಗಾಯಾಳುಗಳು ಹೊಸಕೋಟೆ ಸೇರಿದಂತೆ ಇತರೆ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ ಎನ್ನಲಾಗಿದ್ದು,ಘಟನಾ ಸ್ಥಳಕ್ಕೆ ಡಿವೈಎಸ್ಪಿ ಮುರುಳಿಧರ್, ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸಪೇಕ್ಟರ್ ಶಿವರಾಜ್,ನಗರ ಠಾಣೆ ಇನ್ಸಪೇಕ್ಟರ್ ವಿಜಿಕುಮಾರ್, ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ನಡೆದಾಗ ಅದೇ ರಸ್ತೆಯಲ್ಲಿ ಬರುತ್ತಿದ್ದ ಉನ್ನತ ಶಿಕ್ಷಣ ಸಚಿವರಾದ ಡಾಕ್ಟರ್ ಎಂ ಸಿ ಸುಧಾಕರ್ ತಮ್ಮ ಕಾರು ನಿಲ್ಲಿಸಿ ಘಟನೆ ಬಗ್ಗೆ ಮಾಹಿತಿ ಪಡೆದು ಗಾಯಾಳುಗಳನ್ನು ಆಸ್ಪತ್ರೆ ಸಾಗಿಸಲು ಸಹಕಾರ ನೀಡಿದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27