ಚಿಂತಾಮಣಿ:ಚಿಂತಾಮಣಿ-ಹೊಸಕೋಟೆ ಹೆದ್ದಾರಿಯಲ್ಲಿ APSRTC ಬಸ್ಸು ಹಾಗೂ ಸಿಲಿಂಡರ್ ತುಂಬಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿ ಬಸ್ಸಿನಲ್ಲಿದ್ದ ಹಲವರು ಗಾಯಗೊಂಡ ಘಟನೆ ಸಂತೇಕಲ್ಲಹಳ್ಳಿ ಗೇಟ್ ಸಮೀಪ ಇಂದು ನಡೆದಿದೆ.
ಆಂಧ್ರದ ಕಡಪದಿಂದ ಬೆಂಗಳೂರಿಗೆ ಹೋಗುತ್ತಿದ್ದ ಆಂಧ್ರದ ಸಾರಿಗೆ ಸಂಸ್ಥೆ ಬಸ್ಸು ಮತ್ತು ಚಿಂತಾಮಣಿ ಕಡೆಗೆ ಬರುತ್ತಿದ್ದ ಸಿಲಿಂಡರ್ ತುಂಬಿದ್ದ ಲಾರಿ ಸಂತೇಕಲ್ಲಹಳ್ಳಿ ಗೇಟ್ ಸಮೀಪ ಡಿಕ್ಕಿಯಾಗಿದೆ ಲಾರಿಯಲ್ಲಿದ್ದ ನೂರಾರು ಅಡುಗೆ ಸಿಲಿಂಡರ್ ಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅಪಘಾತದಲ್ಲಿ ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣ ನಷ್ಟದ ಅನಾಹುತ ಸಂಭವಿಸಿಲ್ಲ.
ಬಸ್ಸಿನಲ್ಲಿದ್ದ ನಿತ್ಯ ಪೂಜಿತ್(19 ವರ್ಷ)ಅರುಣಮ್ಮ(40 ವರ್ಷ)ವೆಂಕಟೇಶ್ (60 ವರ್ಷ) ಇವರು ಗಾಯಗೊಂಡು ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಂಭೀರವಾಗಿ ಗಾಯಗೊಂಡ ಗಾಯಾಳುಗಳು ಹೊಸಕೋಟೆ ಸೇರಿದಂತೆ ಇತರೆ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ ಎನ್ನಲಾಗಿದ್ದು,ಘಟನಾ ಸ್ಥಳಕ್ಕೆ ಡಿವೈಎಸ್ಪಿ ಮುರುಳಿಧರ್, ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸಪೇಕ್ಟರ್ ಶಿವರಾಜ್,ನಗರ ಠಾಣೆ ಇನ್ಸಪೇಕ್ಟರ್ ವಿಜಿಕುಮಾರ್, ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ನಡೆದಾಗ ಅದೇ ರಸ್ತೆಯಲ್ಲಿ ಬರುತ್ತಿದ್ದ ಉನ್ನತ ಶಿಕ್ಷಣ ಸಚಿವರಾದ ಡಾಕ್ಟರ್ ಎಂ ಸಿ ಸುಧಾಕರ್ ತಮ್ಮ ಕಾರು ನಿಲ್ಲಿಸಿ ಘಟನೆ ಬಗ್ಗೆ ಮಾಹಿತಿ ಪಡೆದು ಗಾಯಾಳುಗಳನ್ನು ಆಸ್ಪತ್ರೆ ಸಾಗಿಸಲು ಸಹಕಾರ ನೀಡಿದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



