ಬೆಂಗಳೂರು:ಬೆಂಗಳೂರು ನಗರದ ಹೊರವಲಯ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಹಲವು ದಿನಗಳಿಂದ ಸಾರ್ವಜನಿಕವಾಗಿ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.
ಕೆಲ ದಿನಗಳ ಹಿಂದೆ ಚಿರತೆಯೊಂದು ಹೆದ್ದಾರಿ ಕ್ರಾಸ್ ಮಾಡುತ್ತಿರುವ ದೃಶ್ಯ ಸೆರೆಯಾಗಿತ್ತು. ಇದರೊಂದಿಗೆ ಐಟಿಬಿಟಿಗೆ ಖ್ಯಾತಿ ಪಡೆದು ಹಲವಾರು ಸಾಫ್ಟ್ವೇರ್ ಸಂಸ್ಥೆಗಳು ಇರುವ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸ್ಥಳೀಯರು ಹಾಗೂ ಟೆಕ್ಕಿಗಳು ಆತಂಕಕ್ಕೆ ಒಳಗಾಗಿದ್ದರು.
ಚಿರತೆ ಓಡಾಟದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಕ್ಯಾಮರಾಗಳನ್ನ ಅಳವಡಿಸಿ ಚಿರತೆ ಓಡಾಟದ ಬಗ್ಗೆ ನಿಗಾ ವಹಿಸಿದ್ದರು.ಕ್ಯಾಮೆರಾದಲ್ಲಿ ಹಲವು ಕಡೆಗಳಲ್ಲಿ ಚಿರತೆ ಓಡಾಟ ಕಂಡು ಬಂದಿದ್ದು ಅದರ ಜಾಡು ಹಿಡಿದು ಅರಣ್ಯ ಇಲಾಖೆ ಸಿಬ್ಬಂದಿ ಮೂರು ಬೋನ್ ಗಳನ್ನ ಇಟ್ಟು ಸೆರೆಗೆ ಕಾರ್ಯಾಚರಣೆ ನಡೆಸಿದ್ದರು. ಎಲೆಕ್ಟ್ರಾನಿಕ್ ಸಿಟಿಯ ಎಲಿಪ್ಯಾಡ್ ಜಾಗದಲ್ಲಿ ಹೆಚ್ಚಾಗಿ ಓಡಾಡುತ್ತಿದ್ದ ಚಿರತೆ, ಅಲ್ಲಿ ನಿರ್ಜನ ಪ್ರದೇಶದಲ್ಲಿಯೇ ಹೆಚ್ಚಾಗಿ ಬಿಡುಬಿಟ್ಟಿರುವುದು ಖಚಿತವಾಗಿ ಎಲಿಪ್ಯಾಡ್ ಜಾಗದಲ್ಲಿ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.ಬೋನಿಗೆ ಬಿದ್ದಿರುವ ಚಿರತೆಗೆ ಐದು ವರ್ಷದ ಗಂಡು ಚಿರತೆ ಎಂದು ಅರಣ್ಯ ಇಲಾಖೆ ಗುರುತಿಸಿದ್ದು ಸೆರೆಯಾಗಿರುವ ಚಿರತೆಯನ್ನು ಬನ್ನೆರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡಲು ಚಿಂತನೆ ನಡೆಸಿದೆ
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



