ಬೆಂಗಳೂರು:ಬೆಂಗಳೂರು ನಗರದ ಹೊರವಲಯ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಹಲವು ದಿನಗಳಿಂದ ಸಾರ್ವಜನಿಕವಾಗಿ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.
ಕೆಲ ದಿನಗಳ ಹಿಂದೆ ಚಿರತೆಯೊಂದು ಹೆದ್ದಾರಿ ಕ್ರಾಸ್ ಮಾಡುತ್ತಿರುವ ದೃಶ್ಯ ಸೆರೆಯಾಗಿತ್ತು. ಇದರೊಂದಿಗೆ ಐಟಿಬಿಟಿಗೆ ಖ್ಯಾತಿ ಪಡೆದು ಹಲವಾರು ಸಾಫ್ಟ್ವೇರ್ ಸಂಸ್ಥೆಗಳು ಇರುವ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸ್ಥಳೀಯರು ಹಾಗೂ ಟೆಕ್ಕಿಗಳು ಆತಂಕಕ್ಕೆ ಒಳಗಾಗಿದ್ದರು.
ಚಿರತೆ ಓಡಾಟದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಕ್ಯಾಮರಾಗಳನ್ನ ಅಳವಡಿಸಿ ಚಿರತೆ ಓಡಾಟದ ಬಗ್ಗೆ ನಿಗಾ ವಹಿಸಿದ್ದರು.ಕ್ಯಾಮೆರಾದಲ್ಲಿ ಹಲವು ಕಡೆಗಳಲ್ಲಿ ಚಿರತೆ ಓಡಾಟ ಕಂಡು ಬಂದಿದ್ದು ಅದರ ಜಾಡು ಹಿಡಿದು ಅರಣ್ಯ ಇಲಾಖೆ ಸಿಬ್ಬಂದಿ ಮೂರು ಬೋನ್ ಗಳನ್ನ ಇಟ್ಟು ಸೆರೆಗೆ ಕಾರ್ಯಾಚರಣೆ ನಡೆಸಿದ್ದರು. ಎಲೆಕ್ಟ್ರಾನಿಕ್ ಸಿಟಿಯ ಎಲಿಪ್ಯಾಡ್ ಜಾಗದಲ್ಲಿ ಹೆಚ್ಚಾಗಿ ಓಡಾಡುತ್ತಿದ್ದ ಚಿರತೆ, ಅಲ್ಲಿ ನಿರ್ಜನ ಪ್ರದೇಶದಲ್ಲಿಯೇ ಹೆಚ್ಚಾಗಿ ಬಿಡುಬಿಟ್ಟಿರುವುದು ಖಚಿತವಾಗಿ ಎಲಿಪ್ಯಾಡ್ ಜಾಗದಲ್ಲಿ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.ಬೋನಿಗೆ ಬಿದ್ದಿರುವ ಚಿರತೆಗೆ ಐದು ವರ್ಷದ ಗಂಡು ಚಿರತೆ ಎಂದು ಅರಣ್ಯ ಇಲಾಖೆ ಗುರುತಿಸಿದ್ದು ಸೆರೆಯಾಗಿರುವ ಚಿರತೆಯನ್ನು ಬನ್ನೆರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡಲು ಚಿಂತನೆ ನಡೆಸಿದೆ
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



