ನ್ಯೂಜ್ ಡೆಸ್ಕ್: ರಾಜಸ್ಥಾನ ಕಾಂಗ್ರೆಸ್ ನಲ್ಲಿ ಜೊಡೆತ್ತುಗಳಾಗಿ ಕಾರ್ಯನಿರ್ವಹಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದ ರಾಜಸ್ಥಾನದ ಕಾಂಗ್ರೆಸ್ ಸರ್ಕಾರದ ಹಾಲಿ ಮುಖ್ಯಮಂತ್ರಿ ಅಶೋಕ ಗೆಲ್ಲೋಟ್ ಹಾಗು ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ನಡುವೆ ಅಧಿಕಾರ ಹಂಚಿಕೆ ನಿಲ್ಲದ ಸಮರವಾಗಿತ್ತು ಈಗ ಅದು ತಾರಕಕ್ಕೆ ತಲುಪಿದ್ದು ಮುಖ್ಯಮಂತ್ರಿ ಅಶೋಕ ಗೆಲ್ಲೋಟ್ ಜೊತೆ ತೀವ್ರ ಭಿನ್ನಾಭಿಪ್ರಾಯ ಹೊಂದಿರುವ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಕಾಂಗ್ರೆಸ್ ಸಂಬಂಧ ಕಡಿದುಕೊಂಡಿದ್ದಾರೆ ಈಗ ತಮ್ಮದೇ ಮಾರ್ಗದಲ್ಲಿ ಸಾಗಲು ತಯಾರಿ ನಡೆಸುತ್ತಿರುವ ಪೈಲಟ್ ರಾಜಾಸ್ಥಾನದ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಇರುವಾಗ ಹೊಸ ಪಕ್ಷ ಸ್ಥಾಪಿಸಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ನೂತನ ಪಕ್ಷ ಸ್ಥಾಪನೆ ಪ್ರಕ್ರಿಯೆಯಲ್ಲಿ ರಾಜಕೀಯ ಮಹಾ ತಂತ್ರಗಾರ ಪ್ರಶಾಂತ ಕಿಶೋರ ಅವರ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ ಸಚಿನ್ ಪೈಲಟ್ ಗೆ ನೆರವಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ.
ರಾಜೇಶ್ ಪೈಲಟ್ ಅವರ ತಂದೆಯ ಪುಣ್ಯತಿಥಿ ಜೂ.11ರಂದು ಪೈಲಟ್ ನೂತನ ಪಕ್ಷ ಘೋಷಿಸಲಿದ್ದಾರೆ ಎಂದು ಹೇಳಲಾಗುತ್ತಿದೆ ಪಕ್ಷದ ಹೆಸರು “ಪ್ರಗತಿಶೀಲ ಕಾಂಗ್ರೆಸ್” ಎನ್ನುವ ಹೆಸರಿನಲ್ಲಿ ಚುನಾವಣಾ ಅಖಾಡಕ್ಕೆ ಇಳಿಯುವ ಸಾಧ್ಯತೆಯೂ ಇದಿಯಂತೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



