ನ್ಯೂಜ್ ಡೆಸ್ಕ್: ರಾಜಸ್ಥಾನ ಕಾಂಗ್ರೆಸ್ ನಲ್ಲಿ ಜೊಡೆತ್ತುಗಳಾಗಿ ಕಾರ್ಯನಿರ್ವಹಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದ ರಾಜಸ್ಥಾನದ ಕಾಂಗ್ರೆಸ್ ಸರ್ಕಾರದ ಹಾಲಿ ಮುಖ್ಯಮಂತ್ರಿ ಅಶೋಕ ಗೆಲ್ಲೋಟ್ ಹಾಗು ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ನಡುವೆ ಅಧಿಕಾರ ಹಂಚಿಕೆ ನಿಲ್ಲದ ಸಮರವಾಗಿತ್ತು ಈಗ ಅದು ತಾರಕಕ್ಕೆ ತಲುಪಿದ್ದು ಮುಖ್ಯಮಂತ್ರಿ ಅಶೋಕ ಗೆಲ್ಲೋಟ್ ಜೊತೆ ತೀವ್ರ ಭಿನ್ನಾಭಿಪ್ರಾಯ ಹೊಂದಿರುವ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಕಾಂಗ್ರೆಸ್ ಸಂಬಂಧ ಕಡಿದುಕೊಂಡಿದ್ದಾರೆ ಈಗ ತಮ್ಮದೇ ಮಾರ್ಗದಲ್ಲಿ ಸಾಗಲು ತಯಾರಿ ನಡೆಸುತ್ತಿರುವ ಪೈಲಟ್ ರಾಜಾಸ್ಥಾನದ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಇರುವಾಗ ಹೊಸ ಪಕ್ಷ ಸ್ಥಾಪಿಸಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ನೂತನ ಪಕ್ಷ ಸ್ಥಾಪನೆ ಪ್ರಕ್ರಿಯೆಯಲ್ಲಿ ರಾಜಕೀಯ ಮಹಾ ತಂತ್ರಗಾರ ಪ್ರಶಾಂತ ಕಿಶೋರ ಅವರ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ ಸಚಿನ್ ಪೈಲಟ್ ಗೆ ನೆರವಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ.
ರಾಜೇಶ್ ಪೈಲಟ್ ಅವರ ತಂದೆಯ ಪುಣ್ಯತಿಥಿ ಜೂ.11ರಂದು ಪೈಲಟ್ ನೂತನ ಪಕ್ಷ ಘೋಷಿಸಲಿದ್ದಾರೆ ಎಂದು ಹೇಳಲಾಗುತ್ತಿದೆ ಪಕ್ಷದ ಹೆಸರು “ಪ್ರಗತಿಶೀಲ ಕಾಂಗ್ರೆಸ್” ಎನ್ನುವ ಹೆಸರಿನಲ್ಲಿ ಚುನಾವಣಾ ಅಖಾಡಕ್ಕೆ ಇಳಿಯುವ ಸಾಧ್ಯತೆಯೂ ಇದಿಯಂತೆ.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27