ನ್ಯೂಜ್ ಡೆಸ್ಕ್:ಅಪಯಾಕಾರಿ ವಿಷದ ಹಾವನ್ನು ಹಿಡಿದ ವ್ಯಕ್ತಿ ಅದರೊಂದಿಗೆ ಹುಚ್ಚಾಟ ಆಡಿದ ಪರಿಣಾಮ ಹಾವು ವ್ಯಕ್ತಿಯನ್ನು ರೋಷದಿಂದ ನಾಲ್ಕೈದು ಬಾರಿ ಕಚ್ಚಿದೆ ಆದರೂ ಹಾವು ಕಚ್ಚಿದ ವ್ಯಕ್ತಿ ಪವಾಡ ಸದೃಶ ಬದುಕುಳಿದಿರುವ ಘಟನೆ ಕರ್ನಾಟಕದ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹಿರೇಕೊಪ್ಪ ಗ್ರಾಮದಲ್ಲಿ ನಡೆದಿದ್ದು ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದ ವ್ಯಕ್ತಿಯನ್ನು ಸಿದ್ದಪ್ಪ ಎಂದು ಗುರುತಿಸಲಾಗಿದೆ.
ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಮನೆ ಬಳಿ ಹಾವು ಕಾಣಿಸಿಕೊಂಡಿದೆ.ತಕ್ಷಣವೇ ಸ್ಥಳಕ್ಕೆ ಬಂದ ಸಿದ್ದಪ್ಪ ಬಂದಿದ್ದಾನೆ ಮದ್ಯ ಕುಡಿದು ಫೂಲ್ ಟೈಟಾಗಿದ್ದ ಸಿದ್ದಪ್ಪ ವೀರಾವೇಷದಿಂದ ಬರಿಗೈಯಲ್ಲಿಯೇ ಹಾವು ಹಿಡಿದಿದ್ದಾನೆ. ಗ್ರಾಮಸ್ಥರು ಎಷ್ಟೇ ಹೇಳಿದರೂ ಕೇಳದ ಸಿದ್ದಪ್ಪ, ನನ್ನ ಕೈಮೇಲೆ ಗರುಡರೇಖೆ ಇದೆ, ನನಗೇನೂ ಆಗಲ್ಲ ಎಂದು ಅದರೊಂದಿಗೆ ಆಟ ಆಡಿದ್ದಾನೆ.
ಇದರಿಂದಾಗಿ ಆಕ್ರೋಶಗೊಂಡ ಹಾವು ಸಿದ್ದಪ್ಪನನ್ನು ನಾಲ್ಕು ಬಾರಿ ಕಚ್ಚಿದೆ. ಇದರಿಂದ ಗಾಬರಿಗೊಂಡ ಸ್ಥಳೀಯರು ತಕ್ಷಣವೇ ಸಿದ್ದಪ್ಪನನ್ನು ನರಗುಂದ ಸರಕಾರಿ ಆಸ್ಪತ್ರೆಗೆ ದಾಖಲಿದ್ದಾರೆ ಅಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿರುತ್ತಾರೆ.
ಇವೆಲ್ಲಾ ಬೆಳವಣಿಗೆ ನಡುವೆ ಸಿದ್ದಪ್ಪನ ಊರಾದ ಹಿರೇಕೊಪ್ಪ ಗ್ರಾಮದಲ್ಲಿ ಹಾವು ಕಚ್ಚಿದ ಸಿದ್ದಪ್ಪ ಮೃತಪಟ್ಟಿದ್ದಾನೆ ಎಂಬ ಗಾಳಿಸುದ್ದಿ ಹರಡಿದೆ ಗ್ರಾಮಸ್ಥರು ಆತನ ಅಂತ್ಯಕ್ರಿಯೆ ನಡೆಸಲು ಸಿದ್ದತೆ ಮಾಡಿಕೊಳ್ಳಲು ಮುಂದಾಗಿದ್ದಾರೆ ಆದರೆ ಇತ್ತ ಆಸ್ಪತ್ರೆಯ ಹಾಸಿಗೆ ಮೇಲೆ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದಪ್ಪ ಎದ್ದು ಕುಳಿತಿದ್ದಾನೆ ಎನ್ನಲಾಗಿದೆ. ಸದ್ಯಕ್ಕೆ ಸಿದ್ದಪ್ಪ ಸಾವಿನ ದವಡೆಯಿಂದ ಪಾರಾಗಿದ್ದಾನೆ ಈ ಸುದ್ದಿ ಗ್ರಾಮದಲ್ಲಿ ಹಬ್ಬಿದ ನಂತರ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿರುತ್ತಾರೆ ಅಂತೂ ಸಿದ್ದಪ್ಪ ನಂಬಿದ ಕೈ ಮೇಲಿನ ಗರುಡರೇಖೆಯಿಂದಾಗಿ ಪವಾಡ ಸದೃಶವಾಗಿ ಬದುಕಿದ್ದಾನೆ ಎಂದು ಗ್ರಾಮಸ್ಥರು ಹೇಳುತ್ತಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



