ಬೆಂಗಳೂರು:ಅಮ್ಮ, ಅಜ್ಜಿ ಹಾಗೂ ಮಾವನನ್ನು ಕೊಂದ ಯುವಕ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರದ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಿಗೆಪಾಳ್ಯದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ತಾಯಿ ಮಂಗಳಮ್ಮ, ಅಜ್ಜಿ ನಂಜಮ್ಮ ಮತ್ತು ಮಾವ ಸತೀಶ ಅವರನ್ನು ಪ್ರಶಾಂತ್ ಯುವಕ ಕೊಲೆ ಮಾಡಿದ್ದು ನಂತರ ಆತ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಆರೋಪಿ ಕ್ಯಾಬ್ ಚಾಲಕನಾಗಿದ್ದು ಆತನ ತಾಯಿ ಮಂಗಳಮ್ಮ ಗಾರ್ಮೆಂಟ್ಸ್ ಉದ್ಯೋಗಿ ಅಜ್ಜಿ ನಂಜಮ್ಮ ಪೌರಕಾರ್ಮಿಕರಾಗಿದ್ದರೆ ಮಾವ ಸತೀಶ್ ಪ್ಲಂಬರ್ ಕೆಲಸ ಮಾಡುತ್ತ ಜೀವನ ಮಾಡುತ್ತಿದ್ದರು
ಕುಟುಂಬಸ್ಥರು ಕಳೆದ ಏಳೆಂಟು ವರ್ಷದಿಂದ ಕೊಟ್ಟಿಗೆಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಆರೋಪಿ ಪ್ರಶಾಂತ್ ಕಳೆದ ಒಂದು ವರ್ಷದಿಂದ ಕೆಲಸಕ್ಕೆ ಹೋಗುತ್ತಿರಲಿಲ್ಲ ಎನ್ನಲಾಗಿದ್ದು ಕುಟುಂಬದ ಹಿರಿಯ ಆರೋಪಿ ತಂದೆ ಕೆಲಸಕ್ಕೆಂದು ಹೋರ ಹೋಗಿದ್ದಾಗ ಪ್ರಶಾಂತ್ ಮೂವರನ್ನ ಕೊಚ್ಚಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಗೆ ಕಾರಣ ಗೊತ್ತಾಗಿಲ್ಲ. ಕೃತ್ಯ ಎಸಗಿದ ಬಳಿಕ ಆರೋಪಿ ಪರಾರಿಯಾಗಲು ಯತ್ನಿಸಿದ್ದನಾದರೂ ಮನೆ ಮಾಲೀಕ ಹಾಗೂ ಸ್ಥಳೀಯರು ಆರೋಪಿಯನ್ನು ಹಿಡಿದು ಕೊಠಡಿಯಲ್ಲಿ ಕೂಡಿ ಹಾಕಿದ್ದರು. ಪೊಲೀಸರು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಆರೋಪಿ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.
Trending
- ಸರ್ಕಾರಿ ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
- ತೇಜೋವದೆ ಆರೋಪ ಮಾಲೂರು ಚಲಪತಿ ವಿರುದ್ದ ವೆಂಕಟಶಿವಾರೆಡ್ಡಿ ದೂರು!
- ರಸ್ತೆಯಲ್ಲಿ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್,ಜೊತೆಗೆ ಹಾಲಿನ ಟ್ಯಾಂಕರ್ ಭಸ್ಮ!
- ಲಂಚ ಪಡೆಯುವಾಗ ಲೋಕಾ ಪೊಲೀಸರಿಗೆ ಸಿಕ್ಕಿಬಿದ್ದ ಯಲ್ದೂರು ಪಂಚಾಯಿತಿ ಅಧಿಕಾರಿ!
- ಗಂಡನ ಟವಲ್ ಹಿಡಿದು ತಿರುಮಲ ಬೆಟ್ಟ ಹತ್ತಿದ ಹೆಂಡತಿ,ವೃದ್ಧ ದಂಪತಿ LOVE STEP!
- ಮಾಜಿ CM ಸಿದ್ದರಾಮಯ್ಯ ಭೇಟಿಯಾದ ಸಚಿವ ಆಕಾಂಕ್ಷಿಗಳು.
Saturday, July 11



