ಮುಲಕಲೆಚೆರುವು:- ಅದೊಂದು ಸಣ್ಣ ಹಳ್ಳಿ. ಮುಂಜಾನೆ ಹೊತ್ತಿ ಉರಿಯುತ್ತಿರುವ ಬೆಂಕಿ ಜ್ವಾಲೆಯೊಂದಿಗೆ ಯುವತಿಯೊಬ್ಬಳು ನರಳುತ್ತ ಮನೆಯೊಂದರಿಂದ ಹೋರ ಬರುತ್ತಾಳೆ ಅದೇ ಮನೆಯಲ್ಲಿ ಮೂರು ನಾಯಿಗಳು, ಬೆಕ್ಕು ಮತ್ತು 30 ಕೋಳಿಗಳು ವಿಷಪ್ರಾಷನದಿಂದ ಸಾವನ್ನಪ್ಪಿವೆ. ಈ ಮನ ಕಲಕುವ ಘಟನೆ ನಡೆದಿರುವುದು ಚಿಂತಾಮಣಿ ಮತ್ತು ಶ್ರೀನಿವಾಸಪುರ ತಾಲೂಕಿನ ಗಡಿಯಾಚಗಿನ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮುಲಕಲೆಚೇರುವು ಮಂಡಲದ ಸೋಮಪಲ್ಲೆ ಪಂಚಾಯಿತಿ ವ್ಯಾಪ್ತಿಯ ಗುಟ್ಟುಕಿಂದಪಲ್ಲೆ ಗ್ರಾಮದಲ್ಲಿ,ಎಲ್ಲವೂ ಸರಿಯಾಗಿದ್ದರೆ ಈ ತಿಂಗಳ 25 ರಂದು ಮದುವೆಯಾಗಿ ಮತ್ತೊಬ್ಬರ ಜೀವನದಲ್ಲಿ ಪ್ರವೇಶಿಸಬೇಕಾದ ಮಧುಮಗಳು ಸುಮತಿ ಜೀವ ತೆತ್ತಿದ್ದಾಳೆ. ಸುಮತಿ ಬೆರೋಬ್ಬನನ್ನು ಮದುವೆಯಾಗುತ್ತಿದ್ದಾನೆ ಎಂದು ಸುಮತಿ ಸ್ವಂತ ಅಕ್ಕನ ಗಂಡ ಭಾವ ವೆಂಕಟೇಶ್ ಅಸೂಯೆಯಿಂದ ಕೃತ್ಯ ಎಸಗಿದ್ದು ಆಕೆ ಮಲಗಿದ್ದಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುತ್ತಾನೆ ಮನೆಯಲ್ಲಿ ಜಾನುವಾರಗಳಿಗೆ ವಿಷವಿಕ್ಕಿದ್ದಾನೆ ಇದರಿಂದ ಮದುವೆ ಸಂಭ್ರಮದಲ್ಲಿರಬೇಕಾದ ಸುಮತಿ ಕುಟುಂಬ ದುರಂತದಲ್ಲಿ ಮುಳುಗಿದೆ. ಈ ಘಟನೆಯಿಂದ ಒಮ್ಮೆಲೆ ಗ್ರಾಮಸ್ಥರು ಭಯಭೀತರಾಗಿದ್ದು. ಸ್ಥಳೀಯರು ಪೂರ್ಣ ತನಿಖೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಒತ್ತಾಯಿಸಿರುತ್ತಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23


