ಶ್ರೀನಿವಾಸಪುರ:ವಿದ್ಯಾರ್ಥಿಗಳ ಕೊರತೆ ಶಿಥಲವಾದ ಕಟ್ಟಡಗಳು ಸಾರಿಗೆ ವ್ಯವಸ್ಥೆ ಕೊರತೆ ಹೀಗೆ ನಾನಾ ರಿತಿಯ ಸಮಸ್ಯೆಗಳಿಂದ ಇಂದು ದೊಡ್ದ ಸಂಖ್ಯೆಯಲ್ಲಿ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದೆ.
ಆದರೆ ಇಲ್ಲೊಂದು ಸರ್ಕಾರಿ ಶಾಲೆ ಇವೆಲ್ಲದಕ್ಕೂ ಭಿನ್ನ ಎನ್ನುವಂತೆ ಪುಟ್ಟ ಗ್ರಾಮ ಕಶೆಟ್ಟಿಹಳ್ಳಿಯ ಉನ್ನತೀಕೃತ ಸರ್ಕಾರಿ ಶಾಲೆಯಲ್ಲಿ ಭರ್ಜರಿ ನೂರ ಇಪತ್ತು ವಿಧ್ಯಾರ್ಥಿಗಳ ಸಂಖ್ಯೆ ಹೊಂದಿದ್ದು ಇಂತಹ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಅಡ್ಡಗಾಲು ಹಾಕಲು ಸ್ಥಳೀಯವಾಗಿ ಷಡ್ಯಂತರ ನಡೆಯುತ್ತಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಾರೆ.
ಇಂದು ಶಾಲ ವಿದ್ಯಾರ್ಥಿಗಳು ಗ್ರಾಮಸ್ಥರು ಶಾಲ ಆವರಣದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಡ್ಡಗಾಲು ಹಾಕುತ್ತಿರುವ ಪಟ್ಟಬದ್ರರಿಗೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮದ ಪ್ರಗತಿ ಪರ ರೈತ ರಾಮಚಂದ್ರಾರೆಡ್ಡಿ ಹಲವಾರು ವರ್ಷಗಳಿಂದ ಉತ್ತಮವಾಗಿ ಯಾವುದೆ ಖಾಸಗಿ ಶಾಲೆಗಳಿಗೂ ಕಡಿಮೆ ಇಲ್ಲದಂತೆ ಪಾರಂಪರಿಕವಾಗಿ ನಡೆದುಕೊಂಡು ಬರುತ್ತಿರುವ ಕಶೆಟ್ಟಿಹಳ್ಳಿ ಸರ್ಕಾರಿ ಶಾಲೆಯನ್ನು ಕೆಲ ಪಟ್ಟಬದ್ರರು ತಮ್ಮ ಬೆಳೆ ಬೆಯಿಸಿಕೊಳ್ಳುವ ಸಲುವಾಗಿ ಇಲ್ಲಿನ ಶಿಕ್ಷಕರ ವಿರುದ್ದ ಇಲ್ಲಸಲ್ಲದ ಸಬೂಬು ಹೇಳಿ ವರ್ಗಾವಣೆ ಮಾಡಿಸುವ ಕೆಲಸ ಮಾಡುತ್ತಿದ್ದಾರೆ ಇದಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳ ಕುಮ್ಮಕ್ಕು ಇದೆ ಇದರಿಂದಾಗಿ ನಮ್ಮೂರಿನ ವಿದ್ಯಾರ್ಥಿಗಳಿಗೆ ಉತ್ತಮ ಪಾಠ ಪ್ರವಚನ ಸಿಗದಂತೆ ಮಾಡುವ ಮೂಲಕ ನಮ್ಮೂರಿನ ಶಾಲೆ ಅಭಿವೃದ್ಧಿಗೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ದೂರಿದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



