ಶ್ರೀನಿವಾಸಪುರ:ವಿದ್ಯಾರ್ಥಿಗಳ ಕೊರತೆ ಶಿಥಲವಾದ ಕಟ್ಟಡಗಳು ಸಾರಿಗೆ ವ್ಯವಸ್ಥೆ ಕೊರತೆ ಹೀಗೆ ನಾನಾ ರಿತಿಯ ಸಮಸ್ಯೆಗಳಿಂದ ಇಂದು ದೊಡ್ದ ಸಂಖ್ಯೆಯಲ್ಲಿ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದೆ.
ಆದರೆ ಇಲ್ಲೊಂದು ಸರ್ಕಾರಿ ಶಾಲೆ ಇವೆಲ್ಲದಕ್ಕೂ ಭಿನ್ನ ಎನ್ನುವಂತೆ ಪುಟ್ಟ ಗ್ರಾಮ ಕಶೆಟ್ಟಿಹಳ್ಳಿಯ ಉನ್ನತೀಕೃತ ಸರ್ಕಾರಿ ಶಾಲೆಯಲ್ಲಿ ಭರ್ಜರಿ ನೂರ ಇಪತ್ತು ವಿಧ್ಯಾರ್ಥಿಗಳ ಸಂಖ್ಯೆ ಹೊಂದಿದ್ದು ಇಂತಹ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಅಡ್ಡಗಾಲು ಹಾಕಲು ಸ್ಥಳೀಯವಾಗಿ ಷಡ್ಯಂತರ ನಡೆಯುತ್ತಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಾರೆ.
ಇಂದು ಶಾಲ ವಿದ್ಯಾರ್ಥಿಗಳು ಗ್ರಾಮಸ್ಥರು ಶಾಲ ಆವರಣದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಡ್ಡಗಾಲು ಹಾಕುತ್ತಿರುವ ಪಟ್ಟಬದ್ರರಿಗೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮದ ಪ್ರಗತಿ ಪರ ರೈತ ರಾಮಚಂದ್ರಾರೆಡ್ಡಿ ಹಲವಾರು ವರ್ಷಗಳಿಂದ ಉತ್ತಮವಾಗಿ ಯಾವುದೆ ಖಾಸಗಿ ಶಾಲೆಗಳಿಗೂ ಕಡಿಮೆ ಇಲ್ಲದಂತೆ ಪಾರಂಪರಿಕವಾಗಿ ನಡೆದುಕೊಂಡು ಬರುತ್ತಿರುವ ಕಶೆಟ್ಟಿಹಳ್ಳಿ ಸರ್ಕಾರಿ ಶಾಲೆಯನ್ನು ಕೆಲ ಪಟ್ಟಬದ್ರರು ತಮ್ಮ ಬೆಳೆ ಬೆಯಿಸಿಕೊಳ್ಳುವ ಸಲುವಾಗಿ ಇಲ್ಲಿನ ಶಿಕ್ಷಕರ ವಿರುದ್ದ ಇಲ್ಲಸಲ್ಲದ ಸಬೂಬು ಹೇಳಿ ವರ್ಗಾವಣೆ ಮಾಡಿಸುವ ಕೆಲಸ ಮಾಡುತ್ತಿದ್ದಾರೆ ಇದಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳ ಕುಮ್ಮಕ್ಕು ಇದೆ ಇದರಿಂದಾಗಿ ನಮ್ಮೂರಿನ ವಿದ್ಯಾರ್ಥಿಗಳಿಗೆ ಉತ್ತಮ ಪಾಠ ಪ್ರವಚನ ಸಿಗದಂತೆ ಮಾಡುವ ಮೂಲಕ ನಮ್ಮೂರಿನ ಶಾಲೆ ಅಭಿವೃದ್ಧಿಗೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ದೂರಿದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



