ನ್ಯೂಜ್ ಡೆಸ್ಕ್:ತಿರುಮಲ-ತಿರುಪತಿ ದೇವಾಲಯದ ಪ್ರಸಾದ ಲಡ್ಡು ತಯಾರಿಕೆಯಲ್ಲಿ ಕಲಬೆರಕೆ ತುಪ್ಪ ಬಳಸಿದ್ದಾರೆ ಎಂಬ ಸುದ್ದಿ ದೇಶಾದ್ಯಂತ ಸಂಚಲನ ಮೂಡಿಸಿದ್ದು ಇದರ ಅನ್ವಯ ಆಂಧ್ರಪ್ರದೇಶದ ಡೆಪ್ಯೂಟಿ ಸಿಎಂ ಪವನ್ ಕಲ್ಯಾಣ್ ಅವರು ಗುಂಟೂರು ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ 11 ದಿನಗಳ ಪ್ರಾಯಶ್ಚಿತ್ತ ದೀಕ್ಷೆ ತಗೆದುಕೊಂಡಿದ್ದರು.
ವೆಂಕಟೇಶ್ವರನ ಸನ್ನಿಧಾನದಲ್ಲಿ ದೀಕ್ಷೆ ತರೆಯಲಿದ್ದಾರೆ.
ಪವನ್ ಕಲ್ಯಾಣ್ ಅಕ್ಟೋಬರ್ 2 ರಂದು ಸಂಜೆ 4 ಗಂಟೆಗೆ ತಿರುಪತಿ ರೇಣಿಗುಂಟಾ ವಿಮಾನ ನಿಲ್ದಾಣವನ್ನು ತಲುಪಿ ಅಲ್ಲಿಂದ ಸಂಜೆ 5 ಗಂಟೆಗೆ ರಸ್ತೆ ಮೂಲಕ ಅಲಿಪಿರಿಗೆ ತೆರಳಿ ಅಲ್ಲಿಂದ ಮೆಟ್ಟಿಲು ಮಾರ್ಗವಾಗಿ ತಿರುಮಲಕ್ಕೆ ನಡೆದುಕೊಂಡು ರಾತ್ರಿ 9 ಗಂಟೆಗೆ ತಿರುಮಲ ತಲುಪಿ ಅಂದು ರಾತ್ರಿ ತಿರುಮಲ ಬೆಟ್ಟದಲ್ಲಿ ತಂಗಲಿದ್ದಾರೆ. ಮರುದಿನ ಅಂದರೆ ಅಕ್ಟೋಬರ್ 3 ರಂದು ಬೆಳಿಗ್ಗೆ ಶ್ರೀವಾರಿ ದರ್ಶನದ ನಂತರ ದೀಕ್ಷೆಯನ್ನು ತೆರೆಯಲಿದ್ದಾರೆ.ನಂತರ ಸಂಜೆ ತಿರುಪತಿ ಮಹಾನಗರದಲ್ಲಿ ನಡೆಯುವ ವಾರಾಹಿ ಸಭೆಯಲ್ಲಿ ಪವನ್ ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ತಿರುಮಲ ಲಡ್ಡು ಕಲಬೆರಕೆ ಕುರಿತ ಟೀಕೆಗಳ ಬಗ್ಗೆ ಮಾತನಾಡ ಬಹುದು ಎನ್ನಲಾಗಿದೆ.
ಜನಸಂದಣಿ ನಿರ್ವಹಣೆ ಸಮಸ್ಯೆ
ಪವನ್ ಕಲ್ಯಾಣ್ ತಿರುಮಲಕ್ಕೆ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಅವರ ಅಭಿಮಾನಿಗಳನ್ನು ಮತ್ತು ರಾಜಕೀಯ ಕಾರ್ಯಕರ್ತರನ್ನು ನಿಯಂತ್ರಿಸುವ ಕೆಲಸ ಜಿಲ್ಲಾಡಳಿತಕ್ಕೆ ಕಷ್ಟ ಆಗಬಹುದು ಎನ್ನುವ ಮಾತು ಕೇಳಿ ಬರುತ್ತಿದೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Tuesday, April 29