ಬೆಂಗಳೂರು:ಕರ್ನಾಟಕ ರಾಜ್ಯ ಸರ್ಕಾರ ಮಹಿಳೆಯರಿಗೆ ಕಲ್ಪಿಸಿರುವ ಉಚಿತ ಬಸ್ ಪ್ರಯಾಣದ ಕುರಿತಂತೆ ಅಧ್ಯಯನ ನಡೆಸಲು ಆಂಧ್ರ ಸರ್ಕಾರದ ಮಂತ್ರಿಗಳು ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದರು,ಇದಕ್ಕಾಗಿ ರಚಿಸಿರುವ ಆಂಧ್ರ ಸರ್ಕಾರದ ಉಪ ಸಮಿತಿಯ ಸಚಿವರಾದ ಸಾರಿಗೆ ಮಂತ್ರಿ ಮಂಡಿಪಲ್ಲಿರಾಮಪ್ರಸಾದ್ ರೆಡ್ಡಿ, ಗೃಹಮಂತ್ರಿ ವಂಗಲಪುಡಿ ಅನಿತಾ ಮತ್ತು ಗುಮ್ಮಡಿ ಸಂಧ್ಯಾರಾಣಿ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಬಸ್ ಪ್ರಯಾಣ ಮಾಡಿ ಬಸ್ಸಿನಲ್ಲಿದ್ದ ಪ್ರಯಾಣಿಕರ ಅಭಿಪ್ರಾಯಗಳನ್ನು ಶೇಖರಿಸಿದ ಅವರು ಮಹಿಳಾ ಪ್ರಯಾಣಿಕರು ಪಡೆದ ಉಚಿತ ಟಿಕೆಟ್ ಪಡೆದು ಪರಶೀಲನೆ ಮಾಡಿದ್ದಾರೆ ಬಳಿಕ ಕರ್ನಾಟಕ ಸರ್ಕಾರದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗು ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಉಚಿತ ಬಸ್ ಪ್ರಯಾಣದ ಕಾರ್ಯಚಟುವಟಿಕೆ ಕುರಿತಾಗಿ ಮಾಹಿತಿ ಪಡೆದಿರುತ್ತಾರೆ.
200 ಕೋಟಿ ನಷ್ಟದ ಅಂದಾಜು
ಆಂಧ್ರ ಪ್ರದೇಶ ರಾಜ್ಯ ಸಾರಿಗೆ ಸಂಸ್ಥೆ ತನ್ನ ಸಿಬ್ಬಂದಿಗೆ ತಿಂಗಳಿಗೆ ರೂ.300 ಕೋಟಿ ಸಂಬಳಕ್ಕೆ ಖರ್ಚು ಮಾಡುತ್ತಿದ್ದು ಒಂದು ವೇಳೆ ಕರ್ನಾಟಕದಂತೆ ಆಂಧ್ರದಲ್ಲೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ್ದೆ ಆದರೆ ತಿಂಗಳಿಗೆ ರೂ.200 ಕೋಟಿ ಆದಾಯ ಕಳೆದುಕೊಳ್ಳಲಿದೆ ಎಂದು ಅಂದಾಜಿಸಲಾಗಿದೆ ಎಂಬ ಮಾತು ಕೇಳಿಬರುತ್ತಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



