ನ್ಯೂಜ್ ಡೆಸ್ಕ್:ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಬರೆದು ಕರ್ನಾಟಕದ ಮಾವು ಬೆಳೆಗಾರರು ಎದರಿಸುತ್ತಿರುವ ಸಮಸ್ಯೆಗಳನ್ನು ಮತ್ತು ಪಡುತ್ತಿರುವ ತೊಂದರೆಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.
ನಿಮ್ಮ ಅಧಿಕಾರಿಗಳು ತೆಗೆದುಕೊಳ್ಳುತ್ತಿರುವ ನಿರ್ಧಾರಗಳಿಂದಾಗಿ ನಮ್ಮ ರಾಜ್ಯದ ಮಾವಿನ ರೈತರು ಇನ್ನಿಲ್ಲದಂತೆ ತೊಂದರೆಗಳನ್ನು ಎದುರಿಸುತ್ತಿದ್ದಾರೆ ಎಂದು ಅವರು ಹೇಳಿರುವ ಅವರು ಕರ್ನಾಟಕದಲ್ಲಿ ಬೆಳೆದ ತೋತಾಪುರಿ ಮಾವಿನ ಹಣ್ಣುಗಳನ್ನು ಚಿತ್ತೂರು ಜಿಲ್ಲೆಯ ತಿರಳು ಫ್ಯಾಕ್ಟರಿಗಳಿಗೆ ಮಾರಾಟ ಮಾಡುವುದು ಮೊದಲಿನಿಂದಲು ಬಂದಿರುವ ಸಂಪ್ರದಾಯ ಎಂದು ಸಿದ್ದರಾಮಯ್ಯ ಪ್ರಸ್ತಾಪಿಸಿದ್ದು ಚಿತ್ತೂರು ಜಿಲ್ಲಾಧಿಕಾರಿ ಕರ್ನಾಟಕದಿಂದಿಂದ ಬರುವ ಮಾವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ ಇದರೊಂದಿಗೆ ಆಂಧ್ರದ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಅರಣ್ಯ ಮತ್ತು ಮಾರುಕಟ್ಟೆ ಇಲಾಖೆಗಳ ಅಧಿಕಾರಿಗಳ ಸಮೂಹ ಕರ್ನಾಟಕ-ಆಂಧ್ರದ ಗಡಿಯಲ್ಲಿ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಿ ತಪಾಸಣೆ ಮಾಡುತ್ತಿದ್ದಾರೆ ಎಂದು ವಿವರಿಸಿರುವ ಸಿದ್ದರಾಮಯ್ಯನವರು ಇದರಿಂದ ಕರ್ನಾಟಕದ ಮಾವಿನ ರೈತರಿಗೆ ತೊಂದರೆಯಾಗಿದೆ, ನಮ್ಮ ಕರ್ನಾಟಕ ರಾಜ್ಯದ ರೈತರು ಬಹಳ ವರ್ಷಗಳಿಂದ ಸೌಹಾರ್ದತೆಯಿಂದ ಚಿತ್ತೂರು ಜಿಲ್ಲೆಯ ಸಂಸ್ಕರಣ ಘಟಕಗಳಿಗೆ ಮತ್ತು ತಿರುಳು ಕೇಂದ್ರಗಳಿಗೆ ಮಾವಿನ ಹಣ್ಣುಗಳನ್ನು ಪೂರೈಸುತ್ತಿದ್ದಾರೆ ಇತ್ತೀಚೆಗೆ ವಿಧಿಸಲಾದ ನಿಷೇಧದಿಂದಾಗಿ ಅವರು ತೊಂದರೆಗಳನ್ನು ಅನುಭವಿಸುವಂತಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಈ ಬೆಳವಣಿಗೆಗಳು ಎರಡು ರಾಜ್ಯಗಳ ನಡುವಿನ ಸೌಹಾರ್ದತೆಗೆ ಧಕ್ಕೆ ತರುವಂತ ಪರಿಸ್ಥಿತಿಗೆ ಕಾರಣವಾಗಬಹುದು ಎಂದು ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.
ಈ ನಿಷೇಧವು ಎರಡು ರಾಜ್ಯಗಳ ನಡುವಿನ ದೀರ್ಘಕಾಲೀನ ಸಹಕಾರ ಮತ್ತು ಒಕ್ಕೂಟ ವ್ಯವಸ್ಥೆಗೆ ಕೊಡಲಿ ಪೆಟ್ಟು ಬೀಳಬಹುದು, ಎರಡು ರಾಜ್ಯಗಳ ನಡುವೆ ಪರಸ್ಪರ ಸಹಕಾರ ಅಗತ್ಯ ಎಂದು ಅವರು ಪ್ರಸ್ಥಾಪಿಸಿದ್ದಾರೆ ಯಾರೊಂದಿಗೂ ಸಮಾಲೋಚಿಸದೆ ನಿಷೇಧ ಹೇರಲಾಗಿದೆ ಎಂದಿರುವ ಸಿದ್ದರಾಮಯ್ಯ ಮಾವಿನ ಸಾಗಣೆಕೆಯ ಮೇಲಿನ ನಿಷೇಧಕ್ಕೆ ಪ್ರತಿಕ್ರಿಯೆಯಾಗಿ ಆಂಧ್ರಪ್ರದೇಶದಿಂದ ಕರ್ನಾಟಕಕ್ಕೆ ಬರುವಂತ ತರಕಾರಿಗಳು ಮತ್ತು ಇತರೆ ಕೃಷಿ ಉತ್ಪನ್ನಗಳ ಮೇಲೆ ನಿಷೇಧ ಹೇರಬೇಕೆಂದು ಈಗಾಗಲೇ ಒತ್ತಾಯಿಸುತ್ತಿದ್ದಾರೆ ಎಂದು ಹೇಳಿರುವ ಸಿದ್ದರಾಮಯ್ಯ ಅಂತಹ ಪರಿಸ್ಥಿತಿ ಉದ್ಭವಿಸುವುದನ್ನು ನಾನು ಬಯಸುವುದಿಲ್ಲ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಕೊಂಡು ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಅವರು ಆಂಧ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Friday, June 13