ನ್ಯೂಜ್ ಡೆಸ್ಕ್:ರೈತ ಕಾರ್ಮಿಕನೊರ್ವ ಕೃಷಿ ಕೆಲಸಕ್ಕೆ ಹೋಗುತ್ತಿರುವಾಗ ಅವನಿಗೆ ಅದೃಷ್ಟ ಕುಲಾಯಿಸಿದೆ ಇತನಿಗೆ ಅಪರೂಪದ ವಜ್ರದ ಹರಳು ದೊರೆತಿದೆ.
ಇದು ಎಲ್ಲೋ ವಿದೇಶದಲ್ಲಿ ನಡೆದಿರುವುದಲ್ಲ ಇಲ್ಲೆ ಪಕ್ಕದ ಆಂಧ್ರಪ್ರದೇಶದಲ್ಲಿ ರಾಯಲಸಿಮೆ ಪ್ರಾಂತ್ಯದ ಕರ್ನೂಲು ಜಿಲ್ಲೆಯ ತುಗ್ಗಲಿ ಮಂಡಲದ ಸೂರ್ಯತಾಂಡದಲ್ಲಿ ರೈತನೊಬ್ಬ ಹೊಲಕ್ಕೆ ಕೆಲಸಕ್ಕೆ ಹೋಗುತ್ತಿದ್ದಾಗ ಕಣ್ಣಿಗೆ ಬಿದದ್ದು ಹೊಳೆಯುತ್ತಿದ್ದ ಬಿಳಿ ಬಣ್ಣದ ಕಲ್ಲು ತಕ್ಷಣ ಹತ್ತಿರ ಹೋಗಿ ಪರೀಕ್ಷಿಸಿದಾಗ.ಬೆಳ್ಳಗೆ ಮಿರಮಿರನೆ ಕಣ್ಣಿಗೆ ರಾಚಿದೆ ತಕ್ಷಣ ಅದನ್ನು ಕೈಗೆ ತೆಗೆದುಕೊಂಡು ನೋಡಿದ್ದಾನೆ ಅವನಿಗೆ ಅದು ಏನು ಎಂಬುದು ಅರ್ಥವಾಗಿಲ್ಲ ತನ್ನ ಸಹೋದ್ಯೋಗಿಗಳು ತೋರಿಸಿದ್ದಾನೆ ಅವರು ಇದು ವಜ್ರ ಇರಬಹುದು ಎಂದು ಅಂದಾಜಿನಲ್ಲಿ ಹೇಳಿದ್ದು ರೈತ ಕಾರ್ಮಿಕನಿಗೆ ಆನಂದಕ್ಕೆ ಮಿತಿಯೇ ಇಲ್ಲದಂತಾಗಿದೆ ಇದು ಹೊರ ಜಗತ್ತಿಗೆ ಗೊತ್ತಾಗಿ ರೈತನ ಕೂಲಿಕಾರನ ಮನೆಗೆ ಚಿನ್ನದ ವ್ಯಾಪಾರಿಗಳು ಅದನ್ನು ಖರೀದಿಸಲು ಸಾಲುಗಟ್ಟಿ ನಿಂತಿದ್ದಾರೆ, ಕೆಲವು ವ್ಯಾಪಾರಿಗಳು ವಜ್ರವನ್ನು ಪರೀಕ್ಷಿಸಿ ಅದು 8 ಕ್ಯಾರೆಟ್ ಎಂದು ತೀರ್ಮಾನಿಸಿ ವಜ್ರ ಖರೀದಿಗೆ ಪೈಪೋಟಿಗೆ ಬಿದ್ದಿದ್ದಾರೆ ಎನ್ನೂ ಅರಿಯದ ಕಾರ್ಮಿಕ ನನಗೆ ಯಾರು ಹೆಚ್ಚು ಮೊತ್ತ ಕೊಟ್ಟರೆ ಮಾತ್ರ ಕೊಡುತ್ತೇನೆ ಎಂದಿರುತ್ತಾನೆ, ಕಡಿಮೆ ಬೆಲೆಗೆ ಕೊಳ್ಳಲು ವರ್ತಕರು ಯತ್ನಿಸಿದ ವ್ಯಾಪಾರಿಗಳು ಏಕಾಏಕಿ ಸುಸ್ತಾಗಿದ್ದಾರೆ ಕೊನೆಗೆ ಪೆರವಲಿಯ ವ್ಯಾಪಾರಿಯೊಬ್ಬ ರೈತನ ವರ್ಜಕ್ಕೆ 5 ಲಕ್ಷ ರೂ.ಗಳನ್ನು ಕೊಟ್ಟು ಖರೀದಿಸಿದ್ದಾನೆ.
ನಂತರದಲ್ಲಿ ಮತ್ತೊಬ್ಬ ರೈತನಿಗೆ ವಜ್ರ ಸಿಕ್ಕಿದೆ ರಾಯಲಸಿಮೆ ಪ್ರಾಂತ್ಯವಾದ ಕರ್ನುಲೂ ಹಾಗು ಅನಂತಪುರ ಜಿಲ್ಲೆಗಳಲ್ಲಿ ಮಳೆಯಾದರೆ ಸ್ಥಳೀಯ ಜನತೆ ವಜ್ರ ಬೇಟೆ ನಡೆಸುತ್ತಾರೆ ಅದೃಷ್ಟ ಎನ್ನುವಂತೆ ರೈತರು, ಕೃಷಿ ಕಾರ್ಮಿಕರು ಮತ್ತು ಸ್ಥಳೀಯರಿಗೆ ಸಿಗುತ್ತವೆ. ಈ ಹಿಂದೆಯೂ ಬೆಲೆಬಾಳುವ ವಜ್ರಗಳು ರೂ. ಕರ್ನೂಲ್ ಜಿಲ್ಲೆಯ ತುಗ್ಗಲಿ, ಜೊನ್ನಗಿರಿ, ಪೆರವಲಿ, ಪಗಿದಿರೈ, ಅಗ್ರಹಾರ, ಹಂಪಾ, ಯಡವಳಿ, ಕೊತ್ತಪಲ್ಲಿ ಮತ್ತು ಮಡ್ಡಿಕೇರಾ ಪ್ರದೇಶಗಳಲ್ಲಿ ಹಾಗು ಅನಂತಪುರ ಜಿಲ್ಲೆಯ ವಜ್ರಕರೂರು ಮಂಡಲದ ರಾಗುಳಪಾಡು, ಪೊಟ್ಟಿಪಾಡು, ಗಂಜಿಕುಂಟಾ, ತತ್ರಕಲ್ಲು, ಕಮಲಪಾಡು, ಗುಲ್ಪಾಳ್ಯಂ ಹಾಗೂ ಎನ್ಎಂಪಿ ತಾಂಡಾಗಳಲ್ಲಿ ವಜ್ರಗಳು ಹೆಚ್ಚಾಗಿ ಸಿಗುತ್ತದೆ.
ಈ ವರ್ಷ ಹಿಂಗಾರು ಹಂಗಾಮಿನ ಮಳೆಯಿಂದಾಗಿ ವಜ್ರಗಳ ಅಭಿವೃದ್ಧಿ ಆರಂಭವಾಗಿದೆ. ಏಪ್ರಿಲ್, ಮೇ ತಿಂಗಳಲ್ಲಿ ಮಳೆ ಬೀಳುತ್ತಿದ್ದಂತೆ ಕರ್ನೂಲು, ಅನಂತಪುರ ಜಿಲ್ಲೆಗಳಲ್ಲಿ ವಜ್ರ ಬೇಟೆ ಶುರುವಾಗುತ್ತದೆ ಗುಂಪುಗುಂಪಾಗಿ ಹೋಗುವಂತ ರೈತರು, ಕೃಷಿ ಕಾರ್ಮಿಕತಿಗೆ ಸಿಕ್ಕಿವೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



