ಶ್ರೀನಿವಾಸಪುರ:ತಾಲೂಕಿನ ಅರಕೇರಿಯ ಶ್ರೀ ಕೋದಂಡರಾಮ ದೇವಾಲಯದಲ್ಲಿ ಕೃಷ್ಣಾಷ್ಟಮಿ ಸಂಭ್ರಮ ಮನೆಮಾಡಿತ್ತು. ಪ್ರತಿ ವರ್ಷ ಶ್ರಾವಣ ಮಾಸದಲ್ಲಿ ಬರುವ ಕೃಷ್ಣ ಪಕ್ಷದಂದು ಗೋಕುಲಾಷ್ಟಮಿ ಆಚರಿಸುವುದು ಸಂಪ್ರದಾಯ ಅದರಂತೆ ಇಂದು ಶ್ರಾವಣದ ಶನಿವಾರದ ಹಿನ್ನೆಲೆಯಲ್ಲಿ ಮೂಲ ವಿಗ್ರಹ ಶ್ರೀ ಕೋದಂಡರಾಮ ಮೂರ್ತಿಗೆ ಅಲಂಕಾರಪ್ರಿಯ ನಿಲಮೇಘ ಶ್ಯಾಮ (ನಿಲಿಬಣ್ಣದ) ಕೃಷ್ಣಾವತಾರದ ಅಲಂಕಾರ ಮಾಡಲಾಗಿದ್ದು ಕೋದಂಡರಾಮನ ಕೊಳಲು ಇಟ್ಟು ದಾಳಿಂಬೆ ಅಲಂಕಾರ ಮಾಡಲಾಗಿ ಆಭರಣಗಳನ್ನ ತೊಡಿಸಲಾಗಿತ್ತು.
ಕೋದಂಡರಾಮ ಕೃಷ್ಣಾತಾರದಲ್ಲಿ ದರ್ಶನ ನೀಡಿದ.
ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು ರಾಮನ ವಿಗ್ರಹದಲ್ಲಿ ಕೃಷ್ಣನನ್ನು ಕಂಡು ಪುಳಕಿತರಾದರು. ಈ ಸಂದರ್ಭದಲ್ಲಿ ಶ್ರೀಕೋದಂಡರಾಮ ದೇವಾಲಯದ ಅಧ್ಯಕ್ಷ ಇಂದಿರಾಭವನ್ ರಾಜಣ್ಣ ಮಾತನಾಡಿ ಶ್ರಾವಣ ಮಾಸದ ಕೃಷ್ಣ ಪಕ್ಷದ ಅಷ್ಟಮಿಯಂದು ಕೃಷ್ಣನು ಹುಟ್ಟಿದ ದಿನ ಇಡೀ ದಿನ ಇರುವ ಸರ್ವಾರ್ಥ ಸಿದ್ಧಿ ಯೋಗವು ಭಕ್ತರ ಎಲ್ಲಾ ಆಸೆಗಳನ್ನು ಪೂರೈಸುವ ಶುಭ ದಿನವಾಗಿದೆ. ಎಲ್ಲೆಡೆ ಕೃಷ್ಣನನ್ನು ಆರಾಧನೆಯನ್ನು ಮಾಡಲಾಗುತ್ತದೆ.ಜನರನ್ನು ಕಷ್ಟ ಕಾರ್ಪಣ್ಯದಿಂದ ಕಾಪಾಡಿ ಸಂತಸ ನೀಡಲಿ ಎಂದು ಭಕ್ತರು ಕೃಷ್ಣನನ್ನು ಪೂಜಿಸಿ ಅರಾಧಿಸುತ್ತಾರೆ,ಈ ಹಿನ್ನಲೆ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಶ್ರೀ ಕೋದಂಡರಾಮ ಸ್ವಾಮಿಗೆ ನೀಲ ಮೇಘಶಾಮ ಕೃಷ್ಣನ ಅಲಂಕಾರ ಮಾಡಿ ವಿಶೇಷ ಪೂಜೆ ಅಭಿಷೇಕ, ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು ಎಂದರು.ಪೂಜಾ ಕೈಂಕರ್ಯ ಗಳನ್ನು ದೇವಾಲಯದ ಪ್ರಧಾನ ಅರ್ಚಕ ರಾಜಗೋಪಾಲಾಚಾರ್ಯ ನಡೆಸಿಕೊಟ್ಟರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



