ಶ್ರೀನಿವಾಸಪುರ:ತಾಲೂಕಿನ ಅರಕೇರಿಯ ಐತಿಹಾಸಿಕ ಪುಣ್ಯಕ್ಷೇತ್ರ ಶ್ರೀ ನಾಗನಾಥೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಅಂಗವಾಗಿ ಜಾತ್ರಾ ಮಹೋತ್ಸವದ ಅಂಗವಾಗಿ ಪ್ರತಿವರ್ಷದಂತೆ ರಥೋತ್ಸವ ಸಾಂಪ್ರದಾಯಕವಾಗಿ ನಡೆಯಿತು.
ತಾಲೂಕಿನ ಅರಕೇರಿ ಶ್ರೀ ನಾಗನಾಥೇಶ್ವರ ದೇವಾಲಯದಲ್ಲಿ ಎರಡು ದಿನಗಳ ಜಾತ್ರಾ ಮಹೋತ್ಸವ ಇಂದು ಶನಿವಾರ ಆರಂಭವಾಯಿತು ಇಂದು ಬೆಳೆಗ್ಗೆ ವಿಶೇಷ ಹೋಮ ಹವನ ಹಾಗು ಗಿರಿಜಾ ಕಲ್ಯಾಣ ನಡೆಯಿತು,ಮಧ್ಯಾಹ್ನ ಶ್ರೀ ನಾಗನಾಥೇಶ್ವರ ಬ್ರಹ್ಮರಥೋತ್ಸವ ಸಂಪ್ರದಾಯದಂತೆ ದೇವಾಲಯದ ಧರ್ಮಾಧಿಕಾರಿ ರಮೇಶಬಾಬು ನೇತೃತ್ವದಲ್ಲಿ ಸಾವಿರಾರು ಭಕ್ತರು ರಥ ಎಳೆದು ಪುನಿತರಾದರು, ವಿಶೇಷ ಪೂಜಾ ಕಾರ್ಯಗಳು ಹಾಗು ಉತ್ಸವಗಳಲ್ಲಿ ಸಾವಿರಾರು ಭಕ್ತರು ಪಾಲ್ಗೋಂಡು ಭಕ್ತಿಭಾವ ಮೆರೆದರು.
ರಥೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಿ.ರಾಜಣ್ಣ, ಮುಖಂಡ ಗುಂಜೂರುಶ್ರೀನಿವಾಸರೆಡ್ಡಿ,ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ,ಪುರಸಭೆ ಸದಸ್ಯ ಭಾಸ್ಕರ್,ಮಾಜಿ ಸದಸ್ಯ ಸಿಮೆಂಟ್ ರಮೇಶ್,ಆದ್ಯಾತ್ಮಿಕ ಚಿಂತಕ ಬಾಬಾಅಂಕಲ್ ನಾಗರಾಜ್,ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕಲ್ಲೂರುಮಂಜು,ಅತ್ತಿಕುಂಟೆ ರಾಜಶೇಖರೆಡ್ದಿ, ಮುಖಂಡರಾದ,ಲಕ್ಷ್ಮೀಸಾಗರ ಆಶೋಕ್,ಡೈರಿ ಶ್ರೀನಿವಾಸ ಶೆಟ್ಟಿ,ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಗೌಡ,ಜಗದೀಶ್,ಮಾಜಿ ಸದಸ್ಯ ವೆಂಕಟರಮಣಪ್ಪ,ಪುಟ್ಟರಾಜು,ಜೈಕುಮಾರ್ ಸೇರಿದಂತೆ ಮುಂತಾದವರು ಇದ್ದರು. ವೇದ ಬ್ರಹ್ಮ ಉಮಾಶಂಕರ ಶರ್ಮಾ ಅವರ ಮಾರ್ಗದರ್ಷನದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಿತು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Monday, April 28