ಶ್ರೀನಿವಾಸಪುರ:ತಾಲೂಕಿನ ಅರಕೇರಿಯ ಐತಿಹಾಸಿಕ ಪುಣ್ಯಕ್ಷೇತ್ರ ಶ್ರೀ ನಾಗನಾಥೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಅಂಗವಾಗಿ ಜಾತ್ರಾ ಮಹೋತ್ಸವದ ಅಂಗವಾಗಿ ಪ್ರತಿವರ್ಷದಂತೆ ರಥೋತ್ಸವ ಸಾಂಪ್ರದಾಯಕವಾಗಿ ನಡೆಯಿತು.
ತಾಲೂಕಿನ ಅರಕೇರಿ ಶ್ರೀ ನಾಗನಾಥೇಶ್ವರ ದೇವಾಲಯದಲ್ಲಿ ಎರಡು ದಿನಗಳ ಜಾತ್ರಾ ಮಹೋತ್ಸವ ಇಂದು ಶನಿವಾರ ಆರಂಭವಾಯಿತು ಇಂದು ಬೆಳೆಗ್ಗೆ ವಿಶೇಷ ಹೋಮ ಹವನ ಹಾಗು ಗಿರಿಜಾ ಕಲ್ಯಾಣ ನಡೆಯಿತು,ಮಧ್ಯಾಹ್ನ ಶ್ರೀ ನಾಗನಾಥೇಶ್ವರ ಬ್ರಹ್ಮರಥೋತ್ಸವ ಸಂಪ್ರದಾಯದಂತೆ ದೇವಾಲಯದ ಧರ್ಮಾಧಿಕಾರಿ ರಮೇಶಬಾಬು ನೇತೃತ್ವದಲ್ಲಿ ಸಾವಿರಾರು ಭಕ್ತರು ರಥ ಎಳೆದು ಪುನಿತರಾದರು, ವಿಶೇಷ ಪೂಜಾ ಕಾರ್ಯಗಳು ಹಾಗು ಉತ್ಸವಗಳಲ್ಲಿ ಸಾವಿರಾರು ಭಕ್ತರು ಪಾಲ್ಗೋಂಡು ಭಕ್ತಿಭಾವ ಮೆರೆದರು.
ರಥೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಿ.ರಾಜಣ್ಣ, ಮುಖಂಡ ಗುಂಜೂರುಶ್ರೀನಿವಾಸರೆಡ್ಡಿ,ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ,ಪುರಸಭೆ ಸದಸ್ಯ ಭಾಸ್ಕರ್,ಮಾಜಿ ಸದಸ್ಯ ಸಿಮೆಂಟ್ ರಮೇಶ್,ಆದ್ಯಾತ್ಮಿಕ ಚಿಂತಕ ಬಾಬಾಅಂಕಲ್ ನಾಗರಾಜ್,ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕಲ್ಲೂರುಮಂಜು,ಅತ್ತಿಕುಂಟೆ ರಾಜಶೇಖರೆಡ್ದಿ, ಮುಖಂಡರಾದ,ಲಕ್ಷ್ಮೀಸಾಗರ ಆಶೋಕ್,ಡೈರಿ ಶ್ರೀನಿವಾಸ ಶೆಟ್ಟಿ,ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಗೌಡ,ಜಗದೀಶ್,ಮಾಜಿ ಸದಸ್ಯ ವೆಂಕಟರಮಣಪ್ಪ,ಪುಟ್ಟರಾಜು,ಜೈಕುಮಾರ್ ಸೇರಿದಂತೆ ಮುಂತಾದವರು ಇದ್ದರು. ವೇದ ಬ್ರಹ್ಮ ಉಮಾಶಂಕರ ಶರ್ಮಾ ಅವರ ಮಾರ್ಗದರ್ಷನದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಿತು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



