ಶ್ರೀನಿವಾಸಪುರ:ತಾಲೂಕಿನ ಅರಕೇರಿಯ ಐತಿಹಾಸಿಕ ಪುಣ್ಯಕ್ಷೇತ್ರ ಶ್ರೀ ನಾಗನಾಥೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಅಂಗವಾಗಿ ಜಾತ್ರಾ ಮಹೋತ್ಸವದ ಅಂಗವಾಗಿ ಪ್ರತಿವರ್ಷದಂತೆ ರಥೋತ್ಸವ ಸಾಂಪ್ರದಾಯಕವಾಗಿ ನಡೆಯಿತು.
ತಾಲೂಕಿನ ಅರಕೇರಿ ಶ್ರೀ ನಾಗನಾಥೇಶ್ವರ ದೇವಾಲಯದಲ್ಲಿ ಎರಡು ದಿನಗಳ ಜಾತ್ರಾ ಮಹೋತ್ಸವ ಇಂದು ಶನಿವಾರ ಆರಂಭವಾಯಿತು ಇಂದು ಬೆಳೆಗ್ಗೆ ವಿಶೇಷ ಹೋಮ ಹವನ ಹಾಗು ಗಿರಿಜಾ ಕಲ್ಯಾಣ ನಡೆಯಿತು,ಮಧ್ಯಾಹ್ನ ಶ್ರೀ ನಾಗನಾಥೇಶ್ವರ ಬ್ರಹ್ಮರಥೋತ್ಸವ ಸಂಪ್ರದಾಯದಂತೆ ದೇವಾಲಯದ ಧರ್ಮಾಧಿಕಾರಿ ರಮೇಶಬಾಬು ನೇತೃತ್ವದಲ್ಲಿ ಸಾವಿರಾರು ಭಕ್ತರು ರಥ ಎಳೆದು ಪುನಿತರಾದರು, ವಿಶೇಷ ಪೂಜಾ ಕಾರ್ಯಗಳು ಹಾಗು ಉತ್ಸವಗಳಲ್ಲಿ ಸಾವಿರಾರು ಭಕ್ತರು ಪಾಲ್ಗೋಂಡು ಭಕ್ತಿಭಾವ ಮೆರೆದರು.
ರಥೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಿ.ರಾಜಣ್ಣ, ಮುಖಂಡ ಗುಂಜೂರುಶ್ರೀನಿವಾಸರೆಡ್ಡಿ,ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ,ಪುರಸಭೆ ಸದಸ್ಯ ಭಾಸ್ಕರ್,ಮಾಜಿ ಸದಸ್ಯ ಸಿಮೆಂಟ್ ರಮೇಶ್,ಆದ್ಯಾತ್ಮಿಕ ಚಿಂತಕ ಬಾಬಾಅಂಕಲ್ ನಾಗರಾಜ್,ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕಲ್ಲೂರುಮಂಜು,ಅತ್ತಿಕುಂಟೆ ರಾಜಶೇಖರೆಡ್ದಿ, ಮುಖಂಡರಾದ,ಲಕ್ಷ್ಮೀಸಾಗರ ಆಶೋಕ್,ಡೈರಿ ಶ್ರೀನಿವಾಸ ಶೆಟ್ಟಿ,ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಗೌಡ,ಜಗದೀಶ್,ಮಾಜಿ ಸದಸ್ಯ ವೆಂಕಟರಮಣಪ್ಪ,ಪುಟ್ಟರಾಜು,ಜೈಕುಮಾರ್ ಸೇರಿದಂತೆ ಮುಂತಾದವರು ಇದ್ದರು. ವೇದ ಬ್ರಹ್ಮ ಉಮಾಶಂಕರ ಶರ್ಮಾ ಅವರ ಮಾರ್ಗದರ್ಷನದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಿತು.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27