ಮದನಪಲ್ಲಿ: ಆಂಧ್ರಪ್ರದೇಶ ಚಿತ್ತೂರು ಜಿಲ್ಲೆಯ ಪ್ರಖ್ಯಾತ ಪುಣ್ಯಕ್ಷೇತ್ರ ಬೋಯಕೊಂಡ ಗಂಗಮ್ಮ ದೇವಾಲಯ ಭಾನುವಾರ ಭಕ್ತರಿಂದ ತುಂಬಿ ತುಳುಕಾಡಿದೆ. ಆಷಾಡ ಮಾಸದ ಹಿನ್ನೆಲೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಕ್ತರು ದರುಶನಕ್ಕೆ ಬಂದಿದ್ದಾರೆಂದು ದೇವಾಲಯದ ಅಧಿಕಾರಿಗಳು ಹೇಳುತ್ತಾರೆ.
ಆಷಾಡದ ಮೊದಲ ಭಾನುವಾರ ಗಂಗಮ್ಮನನ್ನು ವಿಶೇಷವಾಗಿ ಚಿನ್ನಾಭರಣ ಮತ್ತು ಪುಷ್ಪಗಳಿಂದ ಅಲಂಕರಿಸಿ, ಭಕ್ತರ ದರುಶನಕ್ಕೆ ಏರ್ಪಾಡು ಮಾಡಲಾಗಿತ್ತು ಆಂಧ್ರ ತೆಲಂಗಾಣ ತಮಿಳುನಾಡು ಮತ್ತು ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ ಹಿನ್ನಲೆಯಲ್ಲಿ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು ದರುಶನ ಪಡೆದರು.
ಸಾಮಾನ್ಯ ದಿನಗಳಲ್ಲಿ ಬೆಳಗ್ಗೆ 7 ಗಂಟೆಗೆ ಅಮ್ಮನ ದರ್ಶನ ಆರಂಭವಾಗುತ್ತದೆ ಅದರೆ ಇಂದು ಆಷಾಡದ ಭಾನುವಾರದ ಹಿನ್ನಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ಬೆಳಗ್ಗೆ 5 ಗಂಟೆಗೆ ದರ್ಶನ ಆರಂಭವಾಯಿತು,ಸಂಜೆ 5 ಗಂಟೆಯವರೆಗೂ ಭಕ್ತರ ದಟ್ಟಣೆ ಮುಂದುವರಿದಿತ್ತು. ಸುಮಾರು 40 ಸಾವಿರಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದು ತೀರ್ಥ ಪ್ರಸಾದ ಸ್ವೀಕರಿಸಿದ್ದು ವಿವಿಧ ಸೇವಾ ಟಿಕೆಟ್ ಗಳ ಮೂಲಕ ಒಂದೇ ದಿನದಲ್ಲಿ ರೂ.10.50 ಲಕ್ಷ ಆದಾಯ ಸಂಗ್ರಹವಾಗಿದೆ. ದೇಗುಲದ ಅಧ್ಯಕ್ಷ ಶಂಕರ ನಾರಾಯಣ ಹಾಗೂ ಇವೋ ಚಂದ್ರಮೌಳಿ ಮತ್ತು ಸಿಬ್ಬಂದಿ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಮಾಡಿದ್ದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Monday, April 28